Advertisement

ಅ.2ರೊಳಗೆ ಕರ್ನಾಟಕ ಬಯಲು ಬಹಿರ್ದೆಸೆ ಮುಕ್ತ: ಡಾ.ಜಿ.ಪರಮೇಶ್ವರ್‌

06:00 AM Aug 03, 2018 | |

ಬೆಂಗಳೂರು:ಅಕ್ಟೋಬರ್‌ 2 ರೊಳಗೆ ಕರ್ನಾಟಕ ಬಯಲು ಬಹಿರ್ದೆಸೆ ಮುಕ್ತ ರಾಜ್ಯವಾಗಲಿದೆ ಎಂದು  ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

Advertisement

ವಿಧಾನಸೌಧ-ವಿಕಾಸಸೌಧ ನಡುವಿನ ಗಾಂಧಿ ಪ್ರತಿಮೆ ಬಳಿ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸ್ವತ್ಛಭಾರತ ಅಭಿಯಾನದಡಿಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಆಯೋಜಿಸಲಾಗಿದ್ದ ” ಸ್ವಚ್ಚ ಸರ್ವೇಕ್ಷಣಾ ಗ್ರಾಮೀಣ-18′ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕರ್ನಾಟಕವನ್ನು ಬಯಲು ಬಹಿರ್ದೆಸೆ ಮುಕ್ತಗೊಳಿಸುವ ನಿಟ್ಟಿನಲ್ಲಿ ಈಗಾಗಲೇ 20 ಜಿಲ್ಲೆಗಳಲ್ಲಿ 22 ಲಕ್ಷ ಶೌಚಾಲಯ ನಿರ್ಮಾಣ ಪೂರ್ಣಗೊಳಿಸಲಾಗಿದೆ ಎಂದು ಹೇಳಿದರು.

22 ಲಕ್ಷ ಶೌಚಾಲಯ ನಿರ್ಮಾಣ ಮಾಡುವುದು  ಸಾಮಾನ್ಯವೇನಲ್ಲ. ಈ ವಿಚಾರದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆ ಸಮಾರೋಪಾದಿ ಕೆಲಸ ಮಾಡಿದೆ. ಇನ್ನೂ 10 ಜಿಲ್ಲೆಗಳಲ್ಲಿ 5 ಲಕ್ಷ ಶೌಚಾಲಯ ನಿರ್ಮಾಣ ಬಾಕಿಯಿದೆ ಎಂದು ತಿಳಿಸಿದರು.

ಸ್ವಚ್ಚತೆ ಎಂಬುದು  ನಮ್ಮ ಜೊತೆ ಜೊತೆಯಲ್ಲೇ ಬರಬೇಕು. ಮೊದಲಿಗೆ  ಪರಿಸರ, ಮನೆ ನಂತರ ನಾವು ಸ್ವಚ್ಚವಾಗಬೇಕು. ವಿದೇಶಗಳಲ್ಲಿ ಸ್ವಚ್ಚತೆ ಬಗ್ಗೆ ಹೆಚ್ಚಿನ ಒತ್ತು ನೀಡಲಾಗಿದೆ. ಕರ್ನಾಟಕವೂ ಸ್ವಚ್ಚತೆ ವಿಚಾರದಲ್ಲಿ ನಂಬರ್‌ ಒನ್‌ ಆಗಬೇಕು ಎಂದು ಹೇಳಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೃಷ್ಣಭೈರೇಗೌಡ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಚತೆ ಕಾಪಾಡುವುದು  ಈ ಯೋಜನೆಯ ಮುಖ್ಯ ಗುರಿ.  ನಿಟ್ಟಿನಲ್ಲಿ ಶೌಚಾಲಯ ನಿರ್ಮಾಣಕ್ಕೆ ಸರ್ಕಾರ ಉತ್ತೇಜನ ನೀಡುತ್ತಿದ್ದು ಪ್ರತಿ ಕುಟುಂಬಕ್ಕೂ ಶೌಚಾಲಯ ಒದಗಿಸುತ್ತೇವೆ ಎಂದು ತಿಳಿಸಿದರು.

Advertisement

ರಾಜ್ಯದ 20 ಜಿಲ್ಲೆಗಳಲ್ಲಿ ಶೌಚಾಲಯ ನಿರ್ಮಾಣ ಸಂಪೂರ್ಣವಾಗಿವೆ. ಉಳಿದ 10 ಜಿಲ್ಲೆಗಳಲ್ಲಿ ಅಕ್ಟೋಬರ್‌ ಒಳಗೆ ಪೂರ್ಣಗೊಳ್ಳಲಿದೆ. ಇದರ ಜೊತೆಗೆ ಚರಂಡಿಗಳ ನಿರ್ಮಾಣ ಹಾಗೂಚರಂಡಿಗಳ ಸ್ವಚ್ಚತೆಗೂ ಪ್ರಾಮುಖ್ಯ ನೀಡಲಾಗಿದೆ ಎಂದು ಹೇಳಿದರು.

ಹಳ್ಳಿಗಳನ್ನ ಸ್ವಚ್ಚವಾಗಿಡುವ ಬಗ್ಗೆ ಜಾಗೃತಿ ಅಭಿಯಾನ ಸಹ ಹಮ್ಮಿಕೊಂಡಿದ್ದು ಮಕ್ಕಳ ಮೂಲಕ ಸ್ವಚ್ಚತಾ ಜಾಗೃತಿ ಕಾರ್ಯಕ್ರಮ ರೂಪಿಸಲಾಗಿದೆ. ಮಕ್ಕಳಿಂದಲೇ ಹಿರಿಯರಲ್ಲಿ ತ್ಯಾಜ್ಯ, ಪ್ಲಾಸ್ಟಿಕ್‌, ಸ್ವಚ್ಚತೆ  ಬಗ್ಗೆ ಜಾಗೃತಿ ಮೂಡಿಸುತ್ತೇವೆ ಎಂದು ತಿಳಿಸಿದರು.

ಉತ್ತರಕರ್ನಾಟಕ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಆ ಭಾಗದ ಅಭಿವೃದ್ಧಿಗೆ  ಹೆಚ್ಚಿನ ಒತ್ತು  ನೀಡಿದ್ದೇವೆ. ಇಷ್ಟಾದರೂ ಪ್ರತ್ಯೇಕ ರಾಜ್ಯದ ಮಾತು ಸಲ್ಲದು. ನಾವೆಲ್ಲರೂ ಅಖಂಡ ಕರ್ನಾಟಕದವರು. ಬಂದ್‌ ಯಶಸ್ವಿಯಾಗಿಲ್ಲ, ಬಂದ್‌ಗೆ ಆ ಭಾಗದ ಜನರು ಒಪ್ಪುವುದಿಲ್ಲ. ರಾಜ್ಯವನ್ನ ಒಡೆಯುವ ವಿಚಾರಕ್ಕೆ ಪಕ್ಷಗಳು ಕೈಹಾಕಬಾರದು.
– ಡಾ. ಜಿ.ಪರಮೇಶ್ವರ್‌

Advertisement

Udayavani is now on Telegram. Click here to join our channel and stay updated with the latest news.

Next