Advertisement

ಕರ್ನಾಟಕ-ಕೇರಳ ಗಡಿ ಗ್ರಾಮ: ಆನೆ ಉಪಟಳ

01:49 AM Jun 24, 2019 | Team Udayavani |

ಮಂಡೆಕೋಲು: ಕರ್ನಾಟಕ-ಕೇರಳ ಗಡಿ ಗ್ರಾಮದ ಕೃಷಿ ತೋಟಗಳಿಗೆ ನುಗ್ಗುವ ಗಜಪಡೆಗೆ ಅಂಕುಶ ಹಾಕಲು ಅರಣ್ಯ ಇಲಾಖೆ ಅನುಷ್ಠಾನಿಸಿದ ಯಾವ ತಂತ್ರಗಳು ಕೂಡ ಫಲ ಕೊಡುತ್ತಿಲ್ಲ.

Advertisement

ಕಾಡಾನೆ ನಿಯಂತ್ರಣಕ್ಕೆ ಲಕ್ಷಾಂತರ ರೂ. ಖರ್ಚು ಮಾಡಿ ನಿರ್ಮಿಸಿದ ರಕ್ಷಣ ಬೇಲಿಗಳನ್ನೇ ಹಿಂಡಾನೆ ಗಳು ದಾಟಿಕೊಂಡೇ ಕೃಷಿ ತೋಟಕ್ಕೆ ನುಗ್ಗುತ್ತಿವೆ. ಈ ಬಗ್ಗೆ ‘ಉದಯವಾಣಿ’ ಪ್ರತಿನಿಧಿ ಗಡಿ ಗ್ರಾಮಗಳಲ್ಲಿ ಆನೆ ಹಾವಳಿ ಸ್ಥಿತಿ-ಗತಿಗಳ ಬಗ್ಗೆ ನಡೆಸಿದ ರಿಯಾಲಿಟಿ ಚೆಕ್‌ನಲ್ಲಿ ಕಂಡು ಬಂದ ವಾಸ್ತವ ಪರಿಸ್ಥಿತಿ ಇದು.

9 ಗ್ರಾಮ; 259 ಪ್ರಕರಣ

ಕೇರಳ-ಕರ್ನಾಟಕ ಗಡಿಭಾಗದಲ್ಲಿರುವ 9 ಗ್ರಾಮಗಳ 63 ಪ್ರದೇಶಗಳು ಕಾಡಾನೆ ಹಾವಳಿಗೆ ನಲುಗಿವೆ. ಹತ್ತಾರು ವರ್ಷಗಳಿಂದ ಸಮಸ್ಯೆಗೆ ಮುಕ್ತಿ ಸಿಕ್ಕಿಲ್ಲ. ಕಳೆದ 7 ವರ್ಷಗಳಲ್ಲಿ 9 ಗ್ರಾಮಗಳಲ್ಲಿ ಕೃಷಿ ತೋಟಕ್ಕೆ ಆನೆ ದಾಳಿಯಿಟ್ಟ ಬಗ್ಗೆ ಬೆಳೆಗಾರರು ಅರಣ್ಯ ಇಲಾಖೆಯಲ್ಲಿ ದಾಖಲಿಸಿದ ಪ್ರಕರಣಗಳ ಸಂಖ್ಯೆ 259. ದೂರು ನೀಡದಿರುವ ಹಲವು ಪ್ರಕರಣಗಳು ಇವೆ. ಇಲ್ಲಿ ಆನೆ ತೋಟಕ್ಕೆ ನುಗ್ಗುವುದು ನಿರಂತರ.

ಫಲ ಕಾಣದ ನಿಯಂತ್ರಣ

Advertisement

ಆನೆ ಬಾಧಿತ ಪ್ರದೇಶದಲ್ಲಿ ಹಲವೆಡೆ ಆನೆ ಅಗರ್‌ (ಕಂದಕ), ರೈಲ್ವೇ ಹಳಿ ನಿರ್ಮಾಣ, ಸುರಕ್ಷಾ ಬೇಲಿ ಮೊದಲಾದ ನಿಯಂತ್ರಕ ಸಾಧನ ಅನುಷ್ಠಾನಿಸಲಾಗಿದ್ದು, ಅದರಿಂದ ಶಾಶ್ವತ ಪರಿಹಾರ ಸಿಕ್ಕಿಲ್ಲ.

  • ಶಿವಪ್ರಸಾದ್‌ ಮಣಿಯೂರು
Advertisement

Udayavani is now on Telegram. Click here to join our channel and stay updated with the latest news.

Next