Advertisement

ಲೋಕಾಯುಕ್ತ ಬಿ.ಎಸ್.ಪಾಟೀಲ್ ಅವರಿಗೆ ಪಿತೃ ವಿಯೋಗ

10:40 PM Aug 10, 2022 | Team Udayavani |

ವಿಜಯಪುರ: ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ. ಎಸ್. ಪಾಟೀಲ್ ಅವರ ತಂದೆ ಸಂಗನಗೌಡ ಪಾಟೀಲ ಬುಧವಾರ ರಾತ್ರಿ ಇಹಲೋಕ ತ್ಯಜಿಸಿದ್ದಾರೆ. 98 ವರ್ಷದ ಸಂಗನಗೌಡ ಪಾಟೀಲ ಅವರು ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಬುಧವಾರ ರಾತ್ರಿ 8-45 ರ ಸುಮಾರಿಗೆ ಜಿಲ್ಲೆಯ ತಾಳಿಕೋಟೆ ತಾಲೂಕಿನ ಸ್ವಗ್ರಾಮ ಪಡೇಕನೂರು ನಿವಾಸದಲ್ಲಿ ವಿಧಿವಶರಾಗಿದ್ದಾರೆ.

Advertisement

ಮೃತರು ಪತ್ನಿ, ಪುತ್ರ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಹಾಗೂ ಇಬ್ವರು ಪುತ್ರಿಯರು ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.ಮೃತ ಸಂಗನಗೌಡ ಅವರ ಅಂತ್ಯ ಕ್ರಿಯೆ ಆ.11 ರಂದು ಮಧ್ಯಾಹ್ನ 4 ಗಂಟೆಗೆ ಪಡೇಕನೂರ ಗ್ರಾಮದ ತೋಟದಲ್ಲಿ ನಡೆಯಲಿದೆ.ಸಂಗನಗೌಡ ಅವರ ಅಗಲಿಕೆಗೆ ನಾಡಿನವಿವಿಧ ಮಠಾಧೀಶರು, ರಾಜಕೀಯ ನಾಯಕರು, ಗಣ್ಯರು ಸಂತಾಪ ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next