Advertisement

ಲೋಕ ಭ್ರಷ್ಟಾಚಾರ ಕೇಸ್; ನಿವೃತ್ತ ನ್ಯಾ.ಭಾಸ್ಕರ ರಾವ್ ಗೆ ಬಿಗ್ ರಿಲೀಫ್

01:14 PM Jan 28, 2017 | Team Udayavani |

ಬೆಂಗಳೂರು:ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಲೋಕಾಯುಕ್ತ ನ್ಯಾ.ವೈ.ಭಾಸ್ಕರ ರಾವ್ ಅವರಿಗೆ ಲೋಕಾಯುಕ್ತ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

Advertisement

ಸಾಕ್ಷ್ಯ ನಾಶಕ್ಕೆ ಯತ್ನಿಸಬಾರದು, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು ಎಂಬ ಷರತ್ತು ವಿಧಿಸಿ 1 ಲಕ್ಷ ಮೊತ್ತದ ಬಾಂಡ್, ಒಬ್ಬರ ಶ್ಯೂರಿಟಿ ಆಧಾರದ ಮೇಲೆ ಕೋರ್ಟ್ ಜಾಮೀನು ನೀಡಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ನ್ಯಾ.ಭಾಸ್ಕರ ರಾವ್ ಅವರು ಇಂದು ಕೋರ್ಟ್ ಗೆ ಗೈರು ಹಾಜರಾಗಿದ್ದರು.

ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣದ ಸಂಬಂಧ ಎಸ್ಐಟಿ ಪೊಲೀಸರು ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ನ್ಯಾ.ಭಾಸ್ಕರ ರಾವ್ ಅವರು ಜಾಮೀನು ನೀಡಬೇಕೆಂದು ಲೋಕಾಯುಕ್ತ ವಿಶೇಷ ಕೋರ್ಟ್ ಗೆ ಮನವಿ ಮಾಡಿಕೊಂಡಿದ್ದರು. ಈ ಹಿಂದೆ ಕೋರ್ಟ್ ಜಾಮೀನು ನೀಡಲು ನಿರಾಕರಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next