Advertisement

Guarantee ಯೋಜನೆಗಳಿಂದ ಕರ್ನಾಟಕ ನಂ. 1: ಸಿದ್ದರಾಮಯ್ಯ

01:24 AM Oct 07, 2024 | Team Udayavani |

ಬೆಂಗಳೂರು: ದೇಶದ ಜಿಡಿಪಿಯಲ್ಲಿ ಕರ್ನಾಟಕದ ಪಾಲು ಅಗ್ರಸ್ಥಾನ ತಲುಪಿದ್ದು, ಗ್ಯಾರಂಟಿ ಯೋಜನೆಗಳು ರಾಜ್ಯದ ಆರ್ಥಿಕ ಚಟುವಟಿಕೆಯನ್ನು ಉತ್ತೇಜಿಸುತ್ತಿರುವುದು ಇದರಿಂದ ಸ್ಪಷ್ಟವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.

Advertisement

ಖಾಸಗಿ ಸುದ್ದಿ ಸಂಸ್ಥೆ ಇಂಡಿಯಾ ಟುಡೇ ಬಿಡುಗಡೆ ಮಾಡಿರುವ ಅಂಕಿ-ಅಂಶಗಳನ್ನು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ದೇಶದ ಜಿಡಿಪಿಯಲ್ಲಿ ಕರ್ನಾಟಕದ ಪಾಲು ಅಗ್ರಸ್ಥಾನಕ್ಕೆ ತಲುಪಿದೆ. ಜಿಎಸ್‌ಟಿ ಸಂಗ್ರಹದಲ್ಲೂ ಕರ್ನಾಟಕದ ಪಾಲು ದೊಡ್ಡದಿದೆ ಎಂದಿದ್ದಾರೆ.

ಗ್ಯಾರಂಟಿ ಯೋಜನೆಗಳು ರಾಜ್ಯದ ಆರ್ಥಿಕ ಚಟುವಟಿಕೆಯನ್ನು ಉತ್ತೇಜಿಸುತ್ತಿರುವುದು ಇದರಿಂದ ಸ್ಪಷ್ಟವಾಗುತ್ತದೆ. ಜನಸಾಮಾನ್ಯರ ಖರೀದಿ ಸಾಮರ್ಥ್ಯವನ್ನು ಹೆಚ್ಚಿಸಿದ ಗ್ಯಾರಂಟಿ ಯೋಜನೆಗಳು ಯಶಸ್ವಿ ಯೋಜನೆಗಳಾಗಿ ಹೊರಹೊಮ್ಮಿವೆ ಎಂದೂ ಪ್ರತಿಪಾದಿಸಿದ್ದಾರೆ. ಇಂಡಿಯಾ ಟುಡೇ ಪೋಸ್ಟ್‌ ಪ್ರಕಾರ ದೇಶದ ಜಿಡಿಪಿಯಲ್ಲಿ ಕರ್ನಾಟಕದ ಕೊಡುಗೆ ಶೇ. 2.8ರಷ್ಟು ಏರಿಕೆ ಕಂಡಿದ್ದು, ಎರಡನೇ ಸ್ಥಾನದಲ್ಲಿ ಶೇ. 2.3ರಷ್ಟು ಕೊಡುಗೆ ಕೊಡುತ್ತಿರುವ ಗುಜರಾತ್‌ ಇದೆ. ಜಿಡಿಪಿಗೆ ಶೇ. 2ರಷ್ಟು ಕೊಡುಗೆ ನೀಡುತ್ತಿರುವ ದಿಲ್ಲಿ ಮೂರನೇ ಸ್ಥಾನದಲ್ಲಿದ್ದರೆ, ಶೇ. 2ರಷ್ಟು ಕೊಡುಗೆ ಕೊಡುತ್ತಿರುವ ಆಂಧ್ರಪ್ರದೇಶ, ಶೇ. 1.7ರಷ್ಟು ಕೊಡುಗೆ ನೀಡುತ್ತಿರುವ ಹರಿಯಾಣ ಕ್ರಮವಾಗಿ 4 ಹಾಗೂ 5ನೇ ಸ್ಥಾನದಲ್ಲಿವೆ. ಪಶ್ಚಿಮ ಬಂಗಾಳ ಹಾಗೂ ಉತ್ತರ ಪ್ರದೇಶದ ಕೊಡುಗೆ ಶೇ.-4.9ಕ್ಕೆ ಇಳಿದಿದೆ.

Advertisement

Udayavani is now on Telegram. Click here to join our channel and stay updated with the latest news.

Next