Advertisement

ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಇದ್ದಿದ್ದರೆ ಕೋವಿಡ್ ಸೋಂಕಿನಿಂದ 50,000 ಜನ ಸಾಯುತಿದ್ದರು

01:55 PM Jun 04, 2020 | sudhir |

ಬೆಂಗಳೂರು: ರಾಜ್ಯದಲ್ಲಿ ಈ ಸಂದರ್ಭದಲ್ಲಿ ಸಮ್ಮಿಶ್ರ ಸರ್ಕಾರವಿದ್ದಿದ್ದರೆ ಕೋವಿಡ್ ಕಾಲದಲ್ಲಿ 50,000 ಜನ ಸಾವನ್ನಪ್ಪಿರುತ್ತಿದ್ದರು. ಏಕೆಂದರೆ ಸಮನ್ವಯವಿಲ್ಲದ ಸಮ್ಮಿಶ್ರ ಸರ್ಕಾರವಿರುತ್ತಿತ್ತು ಎಂದು‌ ಮಾಜಿ ಸಚಿವ ಎಚ್.ವಿಶ್ವನಾಥ್ ಹೇಳಿದರು.

Advertisement

ನಗರದಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರವಿಲ್ಲದಿರುವುದರಿಂದ ದೊಡ್ಡ ಅನಾಹುತಕ್ಕೆ ಕಾರಣವಾಗುವುದು ತಪ್ಪಿತು. ಸಮ್ಮಿಶ್ರ ಸರ್ಕಾರವಿದ್ದಿದ್ದರೆ ಕೇಂದ್ರ ಸರ್ಕಾರದ ಯಾವುದೇ ಆದೇಶ ಪಾಲನೆ ಮಾಡದೇ ಉಲ್ಲಂಘನೆ ಮಾಡುತ್ತಿದ್ದರು ಎಂದು ಕಿಡಿ ಕಾರಿದರು.

ಪ್ರಧಾನಿ ಮೋದಿ ಹೇಳಿದರು ಅಂತಾ ಮಾಡಿಬಿಡಬೇಕೋ ಅಂತಾ ಕೇಳುತ್ತಿದ್ದರು. ಸಮ್ಮಿಶ್ರ ಸರ್ಕಾರವಿದ್ದು ಜಮೀರ್ ಅಹಮ್ಮದ್ ಸಚಿವರಾಗಿರುತ್ತಿದ್ದರೆ ಈಗ ಏನಾಗುತ್ತಿತ್ತು? ಕಾಂಗ್ರೆಸ್ ಪಕ್ಷ ಮುಸ್ಲಿಮರ ಪಕ್ಷಪಾತಿ. ಹಾಗಾಗಿ ಯಾರನ್ನೂ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ಕರ್ನಾಟಕದ ಸ್ಥಿತಿ ಅಮೆರಿಕದಂತೆ ಆಗಿಬಿಡುತ್ತಿತ್ತು. ಸಮ್ಮಿಶ್ರ ಸರ್ಕಾರದ ಪತನದಿಂದ ಅದು ತಪ್ಪಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next