Advertisement

ನಿಖಿಲ್ ಕುಮಾರಸ್ವಾಮಿ ಸೋಲಿಗೆ ಎಚ್‌.ಡಿ.ರೇವಣ್ಣ ಕಾರಣ: ಸಚಿವ ಕೆ.ಸಿ.ನಾರಾಯಣಗೌಡ

10:22 PM Mar 13, 2022 | Team Udayavani |

ಮಂಡ್ಯ: ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲಿಗೆ ಅವರ ದೊಡ್ಡಪ್ಪ ಎಚ್‌.ಡಿ.ರೇವಣ್ಣ ಕಾರಣ ಎಂದು ಸಚಿವ ಕೆ.ಸಿ.ನಾರಾಯಣಗೌಡ ಹೊಸ ಬಾಂಬ್‌ ಸಿಡಿಸಿದ್ದಾರೆ.

Advertisement

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಚ್‌.ಡಿ.ರೇವಣ್ಣ ಮಂಡ್ಯ ಕ್ಷೇತ್ರಕ್ಕೆ ಬಂದ ಅನುದಾನವನ್ನು ಹಾಸನಕ್ಕೆ ಹಾಕಿಕೊಂಡರು.

ಮಂಡ್ಯನ ಖಾಲಿ ಬಿಟ್ಟರು. ನಿಖಿಲ್ ಕುಮಾರಸ್ವಾಮಿ ಸೋಲಬೇಕಾದರೆ ಕೆಲಸಗಳು ಕಾರಣ. ರೇವಣ್ಣ ಅವರು ಲೆಟರ್‌ ಹೆಡ್‌ನ‌ಲ್ಲಿ ಹಣ ಹೊಡೆದುಕೊಂಡು ಹೋಗಿ ಅವರ ಜಿಲ್ಲೆ ಅಭಿವೃದ್ಧಿ ಮಾಡಿಕೊಂಡರು. ಅಲ್ಲಿ ಅವರ ಮಗನ ಗೆಲ್ಲಿಸಿಕೊಂಡರು, ನಿಖಿಲ್ ರನ್ನು ಮಂಡ್ಯದಲ್ಲಿ ಸೋಲಿಸಿದರು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next