Advertisement

ಮತದಾನ ಶಾಂತಿಯುತ; ಇವಿಎಂನಲ್ಲಿ ಭವಿಷ್ಯ ಭದ್ರ

02:47 AM May 11, 2023 | Team Udayavani |

ಬೆಂಗಳೂರು: ವಿಧಾನಸಭೆ ಚುನಾವಣೆಯ ಮತದಾನ ಬಹುತೇಕ ಶಾಂತಿ ಯುತ ವಾಗಿ ಮುಕ್ತಾಯವಾಗಿದೆ. ಸರಾಸರಿ ಶೇ. 72.67 ಮತದಾನ ದಾಖಲಾಗಿದೆ. ಇದರೊಂದಿಗೆ 2,615 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆ ಸೇರಿದಂತಾಗಿದೆ.

Advertisement

224 ಕ್ಷೇತ್ರಗಳ 58,545 ಮತಗಟ್ಟೆಗಳಲ್ಲೂ ಮತದಾನ ಮುಗಿದಿದೆ. ಈ ಬಾರಿ ಎಲ್ಲೂ ಮರು ಮತದಾನ ಇಲ್ಲದಿರುವುದು ವಿಶೇಷ. ಗ್ರಾಮೀಣ ಭಾಗಕ್ಕೆ ಹೋಲಿಸಿದರೆ ನಗರ ಪ್ರದೇಶಗಳಲ್ಲಿ ಕಡಿಮೆ ಮತದಾನ ಕಂಡುಬಂದಿದೆ.

ತೀವ್ರ ಜಿದ್ದಾಜಿದ್ದಿಯ ವರುಣ ಕ್ಷೇತ್ರದಲ್ಲಿ ಮತಗಟ್ಟೆ ಕೇಂದ್ರಕ್ಕೆ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಪ್ರವೇಶವನ್ನು ಕಾಂಗ್ರೆಸ್‌ ಕಾರ್ಯಕರ್ತರು ವಿರೋಧಿಸಿದ್ದರಿಂದ 2 ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಸ್ವಲ್ಪ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಯಾದಗಿರಿ ಜಿಲ್ಲೆ ಗುರುಮಿಟ್ಕಲ್‌ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರು ಪರಸ್ಪರ ಬಡಿದಾಡಿಕೊಂಡಿದ್ದು, ಹಲವರನ್ನು ಪೊಲೀಸರು ಬಂಧಿಸಿದ್ದಾರೆ.

ಶನಿವಾರ ಮತ ಎಣಿಕೆ
ಶನಿವಾರ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಾರಂಭವಾಗಲಿದ್ದು, ಮಧ್ಯಾಹ್ನದ ವೇಳೆಗೆ ಬಹುತೇಕ ಫ‌ಲಿತಾಂಶ ಹೊರಬೀಳುವ ಸಾಧ್ಯತೆಯಿದೆ.

ದ.ಕ., ಉಡುಪಿ: ಮತದಾನ ಸುಗಮ
ಮಂಗಳೂರು/ಉಡುಪಿ: ಕರಾವಳಿಯ ಉಭಯ ಜಿಲ್ಲೆಗಳಲ್ಲಿ ಮತ ದಾನ ಶಾಂತಿ ಯುತವಾಗಿ ನಡೆಯಿತು. ಬಿರು ಬಿಸಿಲಿನ ನಡುವೆಯೂ ಮತದಾರರು ಉತ್ಸಾಹ ದಿಂದ ಆಗಮಿಸಿ ಹಕ್ಕು ಚಲಾಯಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next