Advertisement

Karnataka Poll: ಕುಷ್ಟಗಿಗೆ ಪ್ರಧಾನಿ ಮೋದಿ…ದೊಡ್ಡನಗೌಡ ಪಾಟೀಲ್ ಮಾಹಿತಿ

08:29 PM Apr 21, 2023 | Team Udayavani |

ದೋಟಿಹಾಳ: ಕುಷ್ಟಗಿ ನಗರಕ್ಕೆ ಚುನಾವಣೆ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ ಎಂದು ಬಿಜೆಪಿ ಪಕ್ಷದ ಅಭ್ಯರ್ಥಿ ದೊಡ್ಡನಗೌಡ ಪಾಟೀಲ್ ಅವರು ಮಾಹಿತಿ ನೀಡಿದರು

Advertisement

ಸಮೀಪದ ಕೆ.ಬೋದೂರ್ ತಾಂಡದಲ್ಲಿ ಚುನಾವಣೆ ಪ್ರಚಾರಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಹಿತಿ ನೀಡಿದರು. ಪ್ರಧಾನಿ ನರೇಂದ್ರ ಮೋದಿಯವರು ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದ 20 ಕಡೆಗಳಲ್ಲಿ ರ್ಯಾಲಿ ಮತ್ತು ಪ್ರಚಾರ ಮಾಡಲಿದ್ದಾರೆ. ಹೀಗಾಗಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಕುಷ್ಟಗಿ ನಗರಕ್ಕೆ ಆಗಮಿಸಲಿದ್ದಾರೆ. ಇವರ ಜೊತೆಗೆ ನಟ ಸುದೀಪ್ ಕೂಡ ಆಗಮಿಸುವ ಸಾಧ್ಯತೆ ಇದೆ ಎಂದು ಬಿಜೆಪಿ ಪಕ್ಷದ ಜಿಲ್ಲಾ ಅಧ್ಯಕ್ಷ ಹಾಗೂ ಕುಷ್ಟಗಿ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿಯಾದ ದೊಡ್ಡನಗೌಡ ಪಾಟೀಲ್ ಅವರು ಮಾಹಿತಿ ನೀಡಿದರು.

ಈ ಕ್ಷೇತ್ರದ ವಿಶೇಷತೆ: ಕುಷ್ಟಗಿ ವಿಧಾನಸಭಾ ಚುನಾವಣೆಯಲ್ಲಿ ಇಲ್ಲಿಯವರೆಗೆ ಯಾವ ಅಭ್ಯರ್ಥಿಯು ಸತತವಾಗಿ ಎರಡು ಬಾರಿ ವಿಧಾನಸಭಾ ಚುನಾವಣೆಯಲ್ಲಿ ಆಯ್ಕೆಯಾಗಿಲ್ಲ. ಈ ಬಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಮರೇಗೌಡ ಪಾಟೀಲ್ ಬಯ್ಯಾಪುರವರು ಮತ್ತೊಮ್ಮೆ ಗೆಲುವು ಸಾಧಿಸುವ ಮೂಲಕ ಈ ಕ್ಷೇತ್ರದಲ್ಲಿ ಇತಿಹಾಸ ಸೃಷ್ಟಿ ಮಾಡುತ್ತೇನೆ ಎಂದು ಹೇಳುತ್ತಿದ್ದಾರೆ. ಸದ್ಯ ಪ್ರಧಾನಿ ನರೇಂದ್ರ ಮೋದಿಯವರು ಈ ಕ್ಷೇತ್ರಕ್ಕೆ ಭೇಟಿ ನೀಡಿ ರ್ಯಾಲಿ, ಪ್ರಚಾರ ಮಾಡುವದರಿಂದ ಪಕ್ಷದ ಅಭ್ಯರ್ಥಿಗೆ ಯಾವ ರೀತಿ ಅನುಕೂಲವಾಗುತ್ತದೆ ಎಂಬುದು ಕಾದು ನೋಡಬೇಕಿದೆ. ಈ ಬಾರಿ ಕೊಪ್ಪಳದಲ್ಲಿ ಮೋದಿ ಕಾರ್ಯಕ್ರಮ ಆಯೋಜನೆ ಮಾಡುವ ಬದಲು ಕುಷ್ಟಗಿಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತದೆ ಎಂದು ದೊಡ್ಡನಗೌಡ ಪಾಟೀಲ್ ಅವರು ಮಾಹಿತಿ ನೀಡಿದರು.

ಇದನ್ನೂ ಓದಿ: ಈ ಬಾರಿ ಚುನಾವಣೆಯಲ್ಲಿ ಮತದಾರರ ಒಲವು ನನ್ನ ಕಡೆ: ಎಚ್.ಆಂಜನೇಯ

Advertisement

Udayavani is now on Telegram. Click here to join our channel and stay updated with the latest news.

Next