Advertisement

Private Hospitals; ನಾಳೆ(ಆ.17) ಕರ್ನಾಟಕ ರಾಜ್ಯಾದ್ಯಂತ ಒಪಿಡಿ ಸೇವೆಗಳು ಬಂದ್

07:24 PM Aug 16, 2024 | Team Udayavani |

ಬೆಂಗಳೂರು: ಕೋಲ್ಕತಾದಲ್ಲಿ ಸರಕಾರಿ ವೈದ್ಯಕೀಯ ಕಾಲೇಜಿನಲ್ಲಿ ನಡೆದ ವೈದ್ಯೆಯ ರೇ*ಪ್ ಮತ್ತು ಹ*ತ್ಯೆ ಖಂಡಿಸಿ ಕರ್ನಾಟಕ ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಶನಿವಾರ (ಆಗಸ್ಟ್ 17) ರಾಜ್ಯದ್ಯಂತ ಖಾಸಗಿ ಆಸ್ಪತ್ರೆಗಳ ವೈದ್ಯರು ಹೊರರೋಗಿ ವಿಭಾಗ (OPD) ಬಂದ್ ಮಾಡಿ ಪ್ರತಿಭಟನೆ ನಡೆಸಲಿದ್ದಾರೆ.

Advertisement

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವೈದ್ಯರ ಪ್ರತಿಭಟನೆ ಕುರಿತು ಪ್ರತಿಕ್ರಿಯೆ ನೀಡಿದ್ದು ‘ರೋಗಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಲು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಶುಕ್ರವಾರವೂ ರಾಜ್ಯದ ವಿವಿಧೆಡೆ ವೈದ್ಯೆಯ ಬರ್ಬರ ಹ*ತ್ಯೆ ಖಂಡಿಸಿ ವೈದ್ಯರು ಮತ್ತು ವಿವಿಧ ಸಂಘಟನೆಗಳು ಪ್ರಟಿಭಟನೆ ನಡೆಸಿ ಆಕ್ರೋಶ ಹೊರ ಹಾಕಿವೆ.

Advertisement

Udayavani is now on Telegram. Click here to join our channel and stay updated with the latest news.

Next