Advertisement

17ಕ್ಕೆ ಜೆಡಿಎಸ್‌ ಭಿನ್ನಮತೀಯ ಶಾಸಕರಿಂದ ರಾಹುಲ್‌ ಭೇಟಿ

08:35 AM Aug 14, 2017 | Team Udayavani |

ತುಮಕೂರು/ಮಂಡ್ಯ: ಜೆಡಿಎಸ್‌ನಿಂದ ಅಮಾನತ್ತುಗೊಂಡಿರುವ ಶಾಸಕರಾದ ಎನ್‌.ಚಲುವರಾಯಸ್ವಾಮಿ ಹಾಗೂ ಜಮೀರ್‌ ಅಹಮದ್‌ ಅವರು ಆ.17ರಂದು ದೆಹಲಿಯಲ್ಲಿ ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿಯವರನ್ನು ಭೇಟಿ ಮಾಡಲಿದ್ದು, ಕಾಂಗ್ರೆಸ್‌ ಸೇರುವ ಬಗ್ಗೆ ಚರ್ಚಿಸಲಿದ್ದಾರೆ.

Advertisement

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೌಡ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಚಲುವರಾಯಸ್ವಾಮಿ, 7 ಬಂಡಾಯ ಶಾಸಕರು ಹಾಗೂ ವಿಧಾನ ಪರಿಷತ್‌ ಮಾಜಿ ಸದಸ್ಯ ಬಿ.ರಾಮಕೃಷ್ಣ ಸೇರಿ ಒಟ್ಟು ಎಂಟು ಮಂದಿ ರಾಹುಲ್‌ ಗಾಂಧಿಯನ್ನು ಭೇಟಿ ಮಾಡಿ ಚರ್ಚಿಸಲಿದ್ದೇವೆ. ಅಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್‌, ಲೋಕಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಚಿವ ಡಿ.ಕೆ.ಶಿವಕುಮಾರ್‌ ಸಹ ಆಗಮಿಸುವ ನಿರೀಕ್ಷೆಯಿದೆ. ರಾಹುಲ್‌ ಭೇಟಿ ಬಳಿಕ ಯಾವಾಗ ಕಾಂಗ್ರೆಸ್‌ ಸೇರಲಿದ್ದೇವೆ ಎಂಬುದರ ಬಗ್ಗೆ ತಿಳಿಸಲಿದ್ದೇವೆ ಎಂದು ಹೇಳಿದರು. ಇದೇ ವೇಳೆ, ತುಮಕೂರಿನಲ್ಲಿ ಮಾತನಾಡಿದ ಜಮೀರ್‌ ಅಹಮದ್‌, ತಾಂತ್ರಿಕ ತೊಂದರೆಯಿಂದಾಗಿ ಮುಂದಿನ ಡಿಸೆಂಬರ್‌ ಅಂತ್ಯದವರೆಗೆ ತಾವು ಕಾಂಗ್ರೆಸ್‌ಗೆ ಅಧಿಕೃತವಾಗಿ ಸೇರ್ಪಡೆಯಾಗಲು ಸಾಧ್ಯವಿಲ್ಲ. ಆದರೂ, ದೆಹಲಿಗೆ ಆಗಮಿಸುವಂತೆ ಸೋನಿಯಾ ಗಾಂಧಿ ಮತ್ತು ರಾಹುಲ್‌ಗಾಂಧಿ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆ.17ರಂದು ದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದೇವೆ ಎಂದರು. 

Advertisement

Udayavani is now on Telegram. Click here to join our channel and stay updated with the latest news.

Next