ಬೆಂಗಳೂರು: ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದ ಚೊಚ್ಚಲ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದರೆ, ಮತ್ತೊಂದೆಡೆ ರಾಜ್ಯ ರಾಜಕೀಯದಲ್ಲಿ ಗೊಂದಲ ಮುಂದುವರಿದಿದೆ. ಅತೃಪ್ತ ಶಾಸಕರು ಮತ್ತು ಬಿಜೆಪಿಯ ಪ್ರತಿತಂತ್ರಕ್ಕೆ ಕಾಂಗ್ರೆಸ್ ಪ್ರತಿತಂತ್ರ ಹೂಡುತ್ತಿದೆ. ಎಚ್.ಡಿ.ಕುಮಾರಸ್ವಾಮಿ ಪತ್ರಿಕಾಗೋಷ್ಠಿ ನಡೆಸಿ ಆಡಿಯೋ ಬಾಂಬ್ ಸಿಡಿಸಿದ್ದರೆ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪತ್ರಿಕಾಗೋಷ್ಠಿ ನಡೆಸಿ ಅದು ನಕಲಿ ಆಡಿಯೋ ಎಂದು ತಿರುಗೇಟು ನೀಡಿ, ಆರೋಪ ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ ಹೊಂದುವುದಾಗಿ ಸವಾಲು ಹಾಕಿದ್ದಾರೆ. ಈ ಎಲ್ಲಾ ಆರೋಪ, ಪ್ರತ್ಯಾರೋಪದ ನಂತರ ಕುಮಾರಸ್ವಾಮಿ ಬಜೆಟ್ ಮಂಡಿಸಿದ್ದು, ಅದರ ಕ್ಷಣ, ಕ್ಷಣದ ಮಾಹಿತಿ ಇಲ್ಲಿದೆ.
Advertisement