Advertisement

ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾಗಿದ್ದ ಅನುದಾನ ಖೋತಾ : ಬಜೆಟ್ ಭಾಷಣದಲ್ಲಿ ಬಿ.ಎಸ್.ವೈ.

09:56 AM Mar 06, 2020 | Hari Prasad |

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು 2020-21ನೇ ಸಾಲಿನ ರಾಜ್ಯ ಬಜೆಟ್ ಅನ್ನು ವಿಧಾನಸಭೆಯಲ್ಲಿ ಗುರುವಾರ ಮಂಡಿಸಿದ್ದಾರೆ. ಬಜೆಟ್ ಭಾಷಣದ ಪ್ರಾರಂಭದಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೇಂದ್ರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾಗಿದ್ದ ಅನುದಾನ ಕಡಿತವಾಗಿರುವ ಬಗ್ಗೆ ಪ್ರಸ್ತಾಪಿಸಿದರು.

Advertisement

ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ರಾಜ್ಯ ಸರ್ಕಾರಕ್ಕೆ ಕೇಂದ್ರ ನೀಡಬೇಕಾಗಿದ್ದ 8,333 ಕೋಟಿ ರೂಪಾಯಿ ಅನುದಾನ ಕಡಿತ ಮಾಡಲಾಗಿದೆ ಎಂದು ಅವರು ಸದನಕ್ಕೆ ಮಾಹಿತಿ ನೀಡಿದರು.

ಕೇಂದ್ರದ ತೆರಿಗೆಯಲ್ಲಿ ರಾಜ್ಯದ ಪಾಲು ಕಡಿಮೆಯಾಗಿದೆ, ಹೀಗಾಗಿ ರಾಜ್ಯ ಅನುದಾನವೂ ಕಡಿಮೆಯಾಗಿದೆ. ಅಲ್ಲದೆ ಜಿಎಸ್ ಟಿ ಸಂಗ್ರಹದಿಂದ ನೀಡಬೇಕಾಗಿದ್ದ ಅನುದಾನವನ್ನೂ ಕೇಂದ್ರ ಸರ್ಕಾರ ಕಡಿತಗೊಳಿಸಿದೆ ಎಂದು ಬಿಎಸ್ ವೈ ಅವರು ಇದೇ ಸಂದರ್ಭದಲ್ಲಿ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next