Advertisement

ಡಿ ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ರಾಜ್ಯ ಸರಕಾರ ಅನುಮತಿ

08:58 AM Oct 03, 2019 | Team Udayavani |

ಬೆಂಗಳೂರು: ಹಣಕಾಸು ಅಕ್ರಮ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ವಿಚಾರಣೆಗೊಳಗಾಗಿ ಇದೀಗ ತಿಹಾರ್ ಜೈಲಿನಲ್ಲಿ ಬಂಧನದಲ್ಲಿರುವ ಕಾಂಗ್ರೆಸ್ ನಾಯಕ ಮತ್ತು ಮಾಜೀ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.

Advertisement

ಶಿವಕುಮಾರ್ ಅವರ ಮೇಲಿರುವ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ವಹಿಸಲು ರಾಜ್ಯ ಸರಕಾರ ಇದೀಗ ಒಪ್ಪಿಗೆ ನೀಡಿರುವುದಾಗಿ ಮಾಹಿತಿ ಲಭ್ಯವಾಗಿದೆ.

ಐಟಿ ದಾಳಿ ವೇಳೆ ಅಪಾರ ಪ್ರಮಾಣದ ನಗದು ಪತ್ತೆಯಾಗಿತ್ತು. ಈ ಹಿನ್ನಲೆಯಲ್ಲಿ ಹಣ ಭ್ರಷ್ಟಾಚಾರದಿಂದ ಬಂದಿದೆಯೇ ಎಂದು ಪತ್ತೆಹಚ್ಚಲು ಇಡಿ ಸಿಬಿಐ ನೆರವನ್ನು ಕೋರಿತ್ತು. ಇಡಿ ಮನವಿಯನ್ನು ಪರಿಗಣಿಸಿದ ಸಿಬಿಐ ಈ ಹಿಂದೆಯೇ ಶಿವಕುಮಾರ್ ಅವರ ಮೇಲೆ ಸಿಬಿಐ ತನಿಖೆ ನಡೆಸಲು ಪತ್ರ ಮುಖೇನ ರಾಜ್ಯ ಸರಕಾರದ ಅನುಮತಿಯನ್ನು ಕೋರಿತ್ತು. ಇದೀಗ ಸಿಬಿಐ ಮನವಿಗೆ ಸ್ಪಂದಿಸಿರುವ ರಾಜ್ಯ ಸರಕಾರದ ಗೃಹ ಇಲಾಖೆ ಶಿವಕುಮಾರ್ ಅವರ ಮೇಲೆ ಸಿಬಿಐ ತನಿಖೆಗೆ ತನ್ನ ಅನುಮತಿಯನ್ನು ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next