Advertisement

ಕರ್ನಾಟಕ ರಾಜ್ಯ ಮುಕ್ತ ವಿವಿ ಪ್ರವೇಶಾತಿಗೆ ಆ.31ಕೊನೇ ದಿನ‌

11:21 PM Aug 27, 2019 | Lakshmi GovindaRaj |

ಬೆಂಗಳೂರು: ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2019-20ನೇ ಶೈಕ್ಷಣಿಕ ಸಾಲಿಗೆ ಪ್ರವೇಶಾತಿ ಆರಂಭಿಸಿದ್ದು , ಪ್ರಥಮ ವರ್ಷದ ಕೋರ್ಸ್‌ಗಳ ಪ್ರವೇಶಾತಿಗೆ ಆ.31ರೊಳಗೆ ಅರ್ಜಿ ಸಲ್ಲಿಸಬಹುದು. ಸ್ನಾತಕ/ ಸ್ನಾತಕೋತ್ತರ ಕೋರ್ಸ್‌ಗಳಾದ ಬಿ.ಎ/ಬಿ.ಕಾಂ., ಎಂ.ಎ/ಎಂ.ಸಿ.ಜೆ/ಎಂ.ಕಾಂ., ಬಿ.ಎಲ್‌.ಐ.ಎಸ್ಸಿ., ಎಂ.ಎಲ್‌.ಐ.ಎಸ್ಸಿ., ಎಂ.ಎಸ್ಸಿ., ಪಿ.ಜಿ. ಡಿಪ್ಲೋಮಾ ಪ್ರೋಗ್ರಾಮ್ಸ್‌ , ಡಿಪ್ಲೋಮಾ ಪ್ರೋಗ್ರಾಮ್ಸ್‌ , ಸರ್ಟಿಫಿಕೇಟ್‌ ಪ್ರೋಗ್ರಾಮ್ಸ್‌ಗಳ ಪ್ರಥಮ ವರ್ಷದ ಕೋರ್ಸ್‌ಗಳ ಪ್ರವೇಶಾತಿಗೆ ಆ.31 ಕಡೆಯ ದಿನಾಂಕ ಎಂದು ಪ್ರಾದೇಶಿಕ ನಿರ್ದೇಶಕರಾದ ಡಾ. ಲೋಕೇಶ .ಆರ್‌ ತಿಳಿಸಿದ್ದಾರೆ. ಮಾಹಿತಿಗಾಗಿ ದೂ.ಸಂ. 080 23448811, 9844506629, 9620395584, 7760848564 ಸಂಪರ್ಕಿಸಬಹುದು.

Advertisement
Advertisement

Udayavani is now on Telegram. Click here to join our channel and stay updated with the latest news.

Next