Advertisement

ಮುಂಬೈ; ಅತೃಪ್ತ ಶಾಸಕರ ಹೋಟೆಲ್ ಬಳಿ ಕೈ ಕಾರ್ಯಕರ್ತರ ಪ್ರತಿಭಟನೆ, ಪೊಲೀಸ್ ಸರ್ಪಗಾವಲು

09:16 AM Jul 24, 2019 | Nagendra Trasi |

ಮುಂಬೈ: ಕಾಂಗ್ರೆಸ್, ಜೆಡಿಎಸ್ ಬಂಡಾಯ ಶಾಸಕರು ವಾಸ್ತವ್ಯ ಹೂಡಿದ್ದ ಹೋಟೆಲ್ ಮುಂಭಾಗದಲ್ಲಿ ಯುವ ಕಾಂಗ್ರೆಸ್ ಘಟಕ ಮಂಗಳವಾರ ಪ್ರತಿಭಟನೆ ನಡೆಸಿದ್ದು, ಪೊಲೀಸರು ಕಾರ್ಯಕರನ್ನು ವಶಕ್ಕೆ ಪಡೆದಿದ್ದಾರೆ.

Advertisement

ಪೊವೈ ಹೋಟೆಲ್ ಹೊರಭಾಗದಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದ್ದು, ಕಾಂಗ್ರೆಸ್ ಯುವ ಘಟಕದ ಕಾರ್ಯಕರ್ತರು ಒಳಹೋಗದಂತೆ ತಡೆದಿದ್ದು, ಈ ಸಂದರ್ಭದಲ್ಲಿ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಏತನ್ಮಧ್ಯೆ ಕೆಲವು ಮೂಲಗಳ ಪ್ರಕಾರ, ಅತೃಪ್ತ ಶಾಸಕರು ಹೋಟೆಲ್ ಒಳಗೆ ಇದ್ದಾರೆಯೇ ಅಥವಾ ಇಲ್ಲವೇ ಎಂಬುದು ಅನುಮಾನ ಎನ್ನಲಾಗಿದೆ. ಆದರೆ ಮಾಧ್ಯಮಗಳ ದಿಕ್ಕು ತಪ್ಪಿಸಲು ದೆಹಲಿಗೆ ತೆರಳಿವುದಾಗಿ ಬಿಂಬಿಸುವ ಮೂಲಕ ಹೊಸ ನಾಟಕ ಆರಂಭಿಸಿರುವುದಾಗಿ ಕೆಲವು ಮಾಧ್ಯಮಗಳು ವರದಿ ಬಿತ್ತರಿಸಿದ್ದವು.

Advertisement

Udayavani is now on Telegram. Click here to join our channel and stay updated with the latest news.

Next