Advertisement

Chandigarh; ತಡರಾತ್ರಿ ಕಾರ್ಯಾಚರಣೆ: ಕರ್ಣಿ ಸೇನಾ ಮುಖ್ಯಸ್ಥನ ಹತ್ಯೆ ಆರೋಪಿಗಳ ಬಂಧನ

08:21 AM Dec 10, 2023 | Team Udayavani |

ಚಂಡೀಗಢ: ಕೆಲ ದಿನಗಳ ಹಿಂದೆ ನಡೆದ ರಾಷ್ಟ್ರೀಯ ರಜಪುತ್ ಕರ್ಣಿ ಸೇನಾ ಮುಖ್ಯಸ್ಥ ಸುಖದೇವ್ ಸಿಂಗ್ ಗೊಗಾಮೆದಿ ಹತ್ಯೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಡೆಲ್ಲಿ ಕ್ರೈಮ್ ಬ್ರ್ಯಾಂಚ್ ಮತ್ತು ರಾಜಸ್ಥಾನ ಪೊಲೀಸರು ಚಂಡೀಗಢದಲ್ಲಿ ತಡರಾತ್ರಿ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಇದರಲ್ಲಿ ಇಬ್ಬರು ಶೂಟರ್ ಮತ್ತು ಓರ್ವ ಸಹವರ್ತಿಯನ್ನು ಬಂಧಿಸಲಾಗಿದೆ.

Advertisement

ರೋಹಿತ್ ರಾಥೋರ್ ಮತ್ತು ನಿತಿನ್ ಫೌಜಿ ಎಂಬಿಬ್ಬರು ಶೂಟರ್ ಗಳು ಮತ್ತು ಉಧಮ್ ಎಂಬ ಮತ್ತೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಸುಖದೇವ್ ಸಿಂಗ್ ಹತ್ಯೆ ಪ್ರಕರಣದಲ್ಲಿ ಉಧಮ್ ನ ಪಾತ್ರವನ್ನು ಪೊಲೀಸರು ಇನ್ನೂ ಪರಿಶೀಲನೆ ನಡೆಸುತ್ತಿದ್ದಾರೆ.

ಪೊಲೀಸರ ಪ್ರಕಾರ, ಕೊಲೆಯ ನಂತರ ಆರೋಪಿಗಳು ತಮ್ಮ ಶಸ್ತ್ರಾಸ್ತ್ರಗಳನ್ನು ಬಚ್ಚಿಟ್ಟು ರಾಜಸ್ಥಾನದಿಂದ ಹರಿಯಾಣದ ಹಿಸಾರ್ ತಲುಪಿದ್ದಾರೆ. ನಂತರ ಹಿಮಾಚಲ ಪ್ರದೇಶದ ಮನಾಲಿಗೆ ಹೋದರು. ನಂತರ, ಅವರು ಚಂಡೀಗಢಕ್ಕೆ ಬಂದರು, ಅಲ್ಲಿ ಅವರನ್ನು ಬಂಧಿಸಲಾಯಿತು.

ಅವರ ಮೊಬೈಲ್ ನೆಟ್ ವರ್ಕ್ ಗಳ ಜಾಡು ಹಿಡಿದು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೇನಾ ಮುಖ್ಯಸ್ಥ ಸುಖದೇವ್ ಸಿಂಗ್ ಗೊಗಾಮೆದಿ ಅವರನ್ನು ನವೆಂಬರ್ 5 ರಂದು ರಾಜಸ್ಥಾನದ ಜೈಪುರದಲ್ಲಿರುವ ಮನೆಯಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದರು. ಹತ್ಯೆಯ ನಂತರ, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ ನೊಂದಿಗೆ ಸಂಬಂಧ ಹೊಂದಿರುವ ದರೋಡೆಕೋರ ರೋಹಿತ್ ಗೋಡಾರಾ ಅವರು ಸಾಮಾಜಿಕ ಮಾಧ್ಯಮ ಪೋಸ್ಟ್ ಮೂಲಕ ಗೊಗಾಮೆದಿ ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next