Advertisement

ಕಾರ್ಪಾಡಿ: 9ನೇ ಪ್ರತಿಷ್ಠಾ ಮಹೋತ್ಸವ 

03:43 PM May 19, 2018 | |

ಸಂಪ್ಯ: ಆರ್ಯಾಪು ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ 9ನೇ ಪ್ರತಿಷ್ಠಾ ಮಹೋತ್ಸವ ಗುರುವಾರ ದೇವಸ್ಥಾನದಲ್ಲಿ ನಡೆಯಿತು. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಬೆಳಗ್ಗೆ ದೇವತಾ ಪ್ರಾರ್ಥನೆ, ಮಹಾಗಣಪತಿ ಹೋಮ, ಆಶ್ಲೇಷ ಬಲಿ, ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತ ರ್ಪಣೆ, ಸಂಜೆ ದುರ್ಗಾಪೂಜೆ, ರಂಗಪೂಜೆ ನಡೆದು ಪ್ರಸಾದ ವಿತರಣೆ ನಡೆಯಿತು.

Advertisement

ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸದಾನಂದ ಶೆಟ್ಟಿ ಕೂರೇಲು ಬೈಲುಗುತ್ತು, ಸದಸ್ಯರಾದ ರವಿಚಂದ್ರ ಆಚಾರ್ಯ, ಬಾಬು ಮರಿಕೆ, ಯಾದವ ಕೃಷ್ಣ, ಯತೀಂದ್ರನಾಥ ಸಂಟ್ಯಾರು, ಮೀನಾಕ್ಷಿ ನೀರ್ಕಜೆ, ಸಂಪ್ಯ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸೀತಾರಾಮ ಶೆಟ್ಟಿ, ಎಪಿಎಂಸಿ ಅಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ, ಸ್ಥಳೀಯರಾದ ಸುಧಾಕರ ರಾವ್‌ ಆರ್ಯಾಪು, ಕಂಬಳತ್ತಡ್ಡ ಶ್ರೀಕೃಷ್ಣ ಯುವಕ ಮಂಡಲ, ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯೇಶ್ವರ ಯುವಕ ಮಂಡಲದ ಸದಸ್ಯರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next