Advertisement

ಕಾರ್ತಿ ಚಿದಂಬರಂಗೆ ಷರತ್ತುಬದ್ಧ ಜಾಮೀನು

07:30 AM Mar 24, 2018 | |

ಹೊಸದಿಲ್ಲಿ: ಐಎನ್‌ಎಕ್ಸ್‌ ಮೀಡಿಯಾ ಹಗರಣ ಸಂಬಂಧ ಸಿಬಿಐ ವಿಚಾರಣೆ ಎದುರಿಸುತ್ತಿರುವ ಕಾಂಗ್ರೆಸ್‌ ನಾಯಕ ಪಿ. ಚಿದಂಬರಂ ಪುತ್ರ ಕಾರ್ತಿ ಚಿದಂಬರಂಗೆ ದೆಹಲಿ ಹೈಕೋರ್ಟ್‌ ಶುಕ್ರವಾರ ಜಾಮೀನು ನೀಡಿದೆ. ಕಾರ್ತಿಯ 12 ದಿನಗಳ ನ್ಯಾಯಾಂಗ ಬಂಧನ ಶನಿವಾರ ಮುಕ್ತಾಯವಾಗಲಿದೆ. ಕಾರ್ತಿಗೆ ಜಾಮೀನು ನೀಡಿದ ನ್ಯಾಯಾಧೀಶ ಎಸ್‌.ಪಿ. ಗರ್ಗ್‌ ಹಲವು ಷರತ್ತುಗಳನ್ನೂ ವಿಧಿಸಿದ್ದಾರೆ. 10 ಲಕ್ಷ ರೂ. ಶ್ಯೂರಿಟಿ ಪಾವತಿಸುವಂತೆ ಸೂಚಿಸಿದ್ದಾರೆ. ಅಲ್ಲದೆ, ಸಿಬಿಐ ಅನುಮತಿಯಿಲ್ಲದೇ ಹೊರದೇಶಗಳಿಗೆ ತೆರಳುವಂತಿಲ್ಲ ಮತ್ತು ಸಾಕ್ಷ್ಯಗಳನ್ನು ನಾಶಪಡಿಸುವಂತಿಲ್ಲ ಎಂದು ಆದೇಶಿಸಿದ್ದಾರೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next