Advertisement

Karwar; ಕಾರಿಗೆ ಬೈಕ್ ಢಿಕ್ಕಿ: ಬ್ಯಾಂಕ್ ಮ್ಯಾನೇಜರ್ ಮೃತ್ಯು

10:35 PM Aug 21, 2023 | Team Udayavani |

ಕಾರವಾರ: ಬೈಕ್ ಮತ್ತು ಕಾರಿನ ನಡುವೆ ಸೋಮವಾರ ಸಂಭವಿಸಿದ ಅಪಘಾತದಲ್ಲಿ ಕಾರವಾರ ಅರ್ಬನ್ ಬ್ಯಾಂಕ್ ಮ್ಯಾನೇಜರ್ ಮೃತಪಟ್ಟಿದ್ದಾರೆ.

Advertisement

ಸ್ಕೂಟರ್ ನಲ್ಲಿ ಹಾಫ್ ಹೆಲ್ಮೆಟ್ ಧರಿಸಿ ವೇಗವಾಗಿ ಬರುತ್ತಿದ್ದ ಕಾರವಾರ ಅರ್ಬನ್ ಬ್ಯಾಂಕ್ ಮ್ಯಾನೇಜರ್ ಗುರುದಾಸ್ ಬಾಂದೇಕರ್ (55) ಅಪಘಾತದಲ್ಲಿ ಮೃತಪಟ್ಟವರು ಎಂದು ಪೊಲೀಸರು ತಿಳಿಸಿದ್ದಾರೆ. ಬೈಕ್ ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.

ಕಾರವಾರ ಆರ್ ಟಿಒ ಕಚೇರಿ ಮುಂಭಾಗದ ರಸ್ತೆಯಲ್ಲಿ ನಡೆದ ಈ ಅಪಘಾತದಲ್ಲಿ ಗುರುದಾಸ್ ಅವರ ತಲೆಗೆ ಭಾರೀ ಹೊಡೆತ ಬಿದ್ದಿದ್ದು, ರಸ್ತೆಯಲ್ಲಿ ರಕ್ತ ಚೆಲ್ಲಿತ್ತು. ತಕ್ಷಣವೇ ಕಾರಿನ‌ ಚಾಲಕ ಗಾಯಗೊಂಡ ಗುರುದಾಸ್ ಅವರನ್ನು ಕಾರಿನಲ್ಲಿ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದಿದ್ದು, ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದರು. ಕಾರವಾರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next