Advertisement

Karwar; ಇಂದಿರಾ ಕ್ಯಾಂಟಿನ್ ನಲ್ಲಿ ಉಪಹಾರ ಸವಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

02:05 PM Dec 09, 2023 | Team Udayavani |

ಕಾರವಾರ: ನಗರದ ಕೆ.ಇ. ಬಿ. ರಸ್ತೆಯಲ್ಲಿರುವ ಇಂದಿರಾ ಕ್ಯಾಂಟಿನ್ ಗೆ ಇಂದು ಅನಿರೀಕ್ಷಿತವಾಗಿ ಭೇಟಿ ನೀಡಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರು ಬೆಳಗಿನ ಉಪಹಾರ ಸೇವಿಸಿ, ಆಹಾರದ ರುಚಿ ಮತ್ತು ಗುಣಮಟ್ಟದ ಬಗ್ಗೆ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದರು.

Advertisement

ಕ್ಯಾಂಟಿನ್ ನಲ್ಲಿ ಶುಚಿ ಮತ್ತು ರುಚಿಗೆ ಯಾವಾಗಲೂ ಹೆಚ್ಚಿನ ಪ್ರಥಮಾದ್ಯತೆ ನೀಡುವಂತೆ ನಿರ್ದೇಶನ ನೀಡಿದ ಜಿಲ್ಲಾಧಿಕಾರಿಗಳು, ಕ್ಯಾಂಟಿನ್ ಉಪಯೋಗಕ್ಕೆ ನೀಡಿರುವ ಫ್ರಿಡ್ಜ್ ಮತ್ತಿತರ ಯಂತ್ರೋಪಕರಣಗಳನ್ನು ವ್ಯವಸ್ಥಿತವಾಗಿ ಬಳಸುವಂತೆ ಹಾಗೂ ಶುದ್ದ ಕುಡಿಯುವ ಯಂತ್ರದ ಮೂಲಕ ಗ್ರಾಹಕರಿಗೆ ನೀರು ಒದಗಿಸುವಂತೆ ಸೂಚನೆ ನೀಡಿದರು.

ಸರ್ಕಾರ ಸಾರ್ವಜನಿಕರಿಗೆ ಅತ್ಯಂತ ಕಡಿಮೆ ದರದಲ್ಲಿ ಊಟ ಮತ್ತು ಉಪಹಾರ ಒದಗಿಸುವ ಉದ್ದೇಶದಿಂದ ಆರಂಭಿಸಿರುವ ಇಂದಿರಾ ಕ್ಯಾಂಟಿನ್ ಸೇವೆಯನ್ನು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಡೆಯುವ ಮೂಲಕ ಕಡಿಮೆ ವೆಚ್ಚದಲ್ಲಿ ಶುಚಿ ಮತ್ತು ರುಚಿಯಾದ ಆಹಾರ ಸೇವನೆ ಮಾಡುವಂತೆ ತಿಳಿಸಿದರು.

ಪ್ರತಿ ದಿನದ ಮೆನು ಪ್ರಕಾರವೇ ಆಹಾರ ತಯಾರಿಸಿ, ಗ್ರಾಹಕರಿಗೆ ವಿತರಿಸುವಂತೆ ಕ್ಯಾಂಟಿನ್ ಸಿಬ್ಬಂದಿಗೆ ಸೂಚನೆ ನೀಡಿದರು.

ಇಂದಿರಾ ಕ್ಯಾಂಟಿನ್ ನಲ್ಲಿ ಪ್ರತಿ ದಿನ ಬೆಳಗ್ಗೆ ಉಪಹಾರ ಮತ್ತು ಮಧ್ಯಾಹ್ನ ಹಾಗೂ ರಾತ್ರಿ ಊಟದ ವ್ಯವಸ್ಥೆಯಿದ್ದು, ಉಪಹಾರಕ್ಕೆ ರೂ.5 ಮತ್ತು ಊಟಕ್ಕೆ ರೂ.10 ದರ ಮಾತ್ರ ನಿಗದಿಪಡಿಸಿದೆ.

Advertisement

ಜಿಲ್ಲಾಧಿಕಾರಿ ಅವರು ಕ್ಯಾಂಟಿನ್ ನಲ್ಲಿ ತಯಾರಿಸಿದ್ದ ಮಸಾಲ ರೈಸ್ ಸವಿದು, ರುಚಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next