Advertisement

Karwar: ಕೊನೆಗೂ ಸುರಂಗ ಮಾರ್ಗ ಸಂಚಾರಕ್ಕೆ ಮುಕ್ತ

06:41 PM Oct 03, 2023 | Team Udayavani |

ಕಾರವಾರ: ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರವಾರ ನಗರಕ್ಕೆ ಹೊಂದಿಕೊಂಡಿರುವ ಪೈÉಓವರ್‌ ಸನಿಹದ ಟನಲ್‌ ಗಳನ್ನು ವಾಹನ ಸಂಚಾರಕ್ಕೆ ಸೋಮವಾರ ಸಂಜೆ ಮುಕ್ತಗೊಳಿಸಲಾಗಿದೆ.

Advertisement

ಸೋಮವಾರ ಮಧ್ಯಾಹ್ನದಿಂದ ಶಾಸಕ ಸತೀಶ್‌ ಸೈಲ್‌, ಎಂಎಲ್‌ ಸಿ ಗಣಪತಿ ಉಳ್ವೆಕರ್‌, ನಗರಸಭೆಯ ಮಾಜಿ ಅಧ್ಯಕ್ಷ ನಿತಿನ್‌ ಪಿಕಳೆ, ಮಾಜಿ ಉಪಾಧ್ಯಕ್ಷ ಪಿ.ಪಿ.ನಾಯ್ಕ ಸತತ ಮೂರು ಗಂಟೆಗಳ ಕಾಲ ಈ ಬಗ್ಗೆ ಮಾತುಕತೆ ನಡೆಸಿದರು.

ಮಾತುಕತೆ ಫಲಪ್ರದವಾದ ಕಾರಣ ಜಿಲ್ಲಾಧಿಕಾರಿಗಳಿಗೆ ದೂರವಾಣಿ ಕರೆ ಮಾಡಿದ ಶಾಸಕರು, ಸಾರ್ವಜನಿಕರಿಗೆ
ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಸುರಂಗಮಾರ್ಗ ಸಂಚಾರ ಮುಕ್ತಗೊಳಿಸುವಂತೆ ಸೂಚಿಸಿದರು. ಬಳಿಕ ಜಿಲ್ಲಾಧಿಕಾರಿಗಳು ಈ ಬಗ್ಗೆ ಆದೇಶ ಹೊರಡಿಸಿದರು.

ಸಂಸದರ ಓಡಾಟಕ್ಕೆ ಮುಕ್ತವಾಗಿದ್ದ ಸುರಂಗ: ಕೇಂದ್ರ ಸಂಸದೀಯ ಸಮಿತಿ ನೌಕಾನೆಲೆಗೆ ಬಂದ ಕಾರಣ ಐಆರ್‌ಬಿ ಅಧಿಕಾರಿಗಳು ಟನಲ್‌ ನ್ನು ಓಪನ್‌ ಮಾಡಿಕೊಟ್ಟಿದ್ದರು. ಇದು ಮಾಧ್ಯಮದವರ ಗಮನಕ್ಕೆ ಬಂದಿತ್ತು. ಬಳಿಕ ಜಿಲ್ಲಾಧಿಕಾರಿ, ಶಾಸಕರು, ವಿಧಾನಪರಿಷತ್‌ ಸದಸ್ಯ ಉಳ್ವೆಕರ್‌ ಅವರಿಗೂ ಈ ಮಾಹಿತಿ ತಲುಪಿತು. ಆಗ ಜನಪ್ರತಿನಿಧಿಗಳಿಗೆ ಒಂದು ನೀತಿ, ಸಾರ್ವಜನಿಕರಿಗೆ ಒಂದು ನೀತಿಯೇ ಎಂಬ ಪ್ರಶ್ನೆ ಉದ್ಭವಿಸಿತು . ತಕ್ಷಣ ಶಾಸಕರು ಜಿಲ್ಲಾಧಿಕಾರಿ, ಮಾಧ್ಯಮಗಳ ಜೊತೆ ಮಾತನಾಡಿ, ವಿಧಾನ ಪರಿಷತ್‌ ಸದಸ್ಯ ಗಣಪತಿ ಉಳ್ವೆಕರ್‌ ಜೊತೆ ಮಾತುಕತೆ ನಡೆಸಿದರು. ಬಳಿಕ ಸುಂರಂಗದಲ್ಲಿ ಏನಾದರೂ
ಅನಾಹುತವಾದಲ್ಲಿ ಅದರ ಹೊಣೆಯನ್ನು ಎನ್‌ಎಚ್‌ ಎಐ ಮತ್ತು ಐಆರ್‌ಬಿ ವಹಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಂದ ಪತ್ರ ಬರೆಯಿಸಿ ವಾಹನ ಸಂಚಾರಕ್ಕೆ ಮುಕ್ತಗೊಳಿಸುವ ನಿರ್ಧಾರಕ್ಕೆ ಬರಲಾಯಿತು.

ಜಿಲ್ಲಾಧಿಕಾರಿಗೆ ಬಂದ ಮೇಲ್‌: ಈ ವಿಷಯವಾಗಿ ಜಿಲ್ಲಾಧಿಕಾರಿಗಳು ಸಭೆ ನಡೆಸಿ ಅ.2 ರೊಳಗೆ ಟನಲ್‌ ಸುರಕ್ಷತೆ ಬಗ್ಗೆ ಖಾತ್ರಿ ಪಡಿಸಲು ಐಆರ್‌ಬಿ ಮತ್ತು ಎನ್‌ಎಚ್‌ಎಐಗೆ ಗಡುವು ನೀಡಿದ್ದರು. ಆದರೆ ಟನಲ್‌ ಪರಿಶೀಲನೆಗೆ ಎನ್‌ಎಚ್‌ಎಐ ಹಿರಿಯ ಅಧಿಕಾರಿ ಅ. 8 ರಂದು ಬರಲಿದ್ದಾರೆ. ಜೆ.ಪಿ.ನಡ್ಡಾ ಪುಣೆಗೆ ಬರುವ ಕಾರಣ ಟೆಕ್ನಾಲಜಿಕಲ್‌ ಯುನಿವರ್ಸಿಟಿ ವಿಜ್ಞಾನಿಗಳು ಕಾರವಾರಕ್ಕೆ ತಕ್ಷಣ ಬರಲಾಗುತ್ತಿಲ್ಲ. ಅವರು ಅ. 8 ರಂದು ಬರಲಿದ್ದಾರೆಂದು ಜಿಲ್ಲಾಧಿಕಾರಿಗಳಿಗೆ ಇ-ಮೇಲ್‌ ಬಂದಿತ್ತು. ಇದನ್ನು ಗಮನಿಸಿ, ಸಾರ್ವಜನಿಕರಿಗೆ , ವಾಹನ ಸವಾರರಿಗೆ ತೊಂದರೆ ಆಗುವುದನ್ನು ತಪ್ಪಿಸಲು, ಸುರಂಗವನ್ನು ಸಂಚಾರಮುಕ್ತಗೊಳಿಸಿ ಜಿಲ್ಲಾಧಿಕಾರಿಗಳು ಸೋಮವಾರ ಸಂಜೆ ಆದೇಶ ಹೊರಡಿಸಿದರು. ಸುಂರಗ ಮಾರ್ಗ ಓಪನ್‌ ಆಗಿದ್ದಕ್ಕೆ ಸಾರ್ವಜನಿಕರು ಹಾಗೂ ವಾಹನ ಸಾವರರು ಸಂತಸ ವ್ಯಕ್ತಪಡಿಸಿದ್ದಾರೆ

Advertisement

ಅನಾಹುತದ ಹೊಣೆ ಹೊರಲು ಸೂಚನೆ
ಅ.8 ರೊಳಗೆ ಟನಲ್‌ ಸುರಕ್ಷತೆ ಮತ್ತೂಮ್ಮೆ ಪರೀಕ್ಷಿಸಬೇಕು. ಏನಾದರೂ ಅನಾಹುತವಾದರೆ ಎನ್‌ಎಚ್‌ ಎಐ ಹೊನ್ನಾವರದಲ್ಲಿನ ಕಚೇರಿಯ ಪ್ರೊಜೆಕ್ಟ್ ಡೈರೆಕ್ಟರ್‌ ಅದರ ಹೊಣೆ ಹೊರಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ. ಈ ಆದೇಶವನ್ನು ಸಂಬಂಧಿಸಿದ ಗುತ್ತಿಗೆ ಕಂಪನಿ ಹಾಗೂ ಎನ್‌ಎಚ್‌ಎಐ ಹೊನ್ನಾವರ ಕಚೇರಿಗೆ ಕಳುಹಿಸಲಾಗಿದೆ. ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಪೊಲೀಸ್‌ ಅಧೀಕ್ಷಕರು, ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ನಿರ್ದೇಶಕರಿಗೆ, ಜಿಲ್ಲೆಯ ಕೆಎಸ್‌ಆರ್‌ಟಿಸಿ ಅಧಿಕಾರಿಗಳು, ತಹಶೀಲ್ದಾರರು, ಸಹಾಯಕ ಕಮಿಷನರ್‌ಗಳಿಗೆ ಕಳುಹಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next