Advertisement

Karwar: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ -ಇಬ್ಬರು ಯುವಕರು ಸ್ಥಳದಲ್ಲೇ ಸಾವು

08:34 PM Oct 15, 2023 | Team Udayavani |

ಯಲ್ಲಾಪುರ:  ಪಟ್ಟಣದ ಕಾರವಾರ ಬಳ್ಳಾರಿ ರಸ್ತೆಯ ಶಾನಭಾಗ ಹೋಟೆಲ್‌ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ರವಿವಾರ ಭೀಕರ ಅಪಘಾತ ಸಂಭವಿಸಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ.

Advertisement

ಬೈಕ್‌ನಲ್ಲಿ ಮೂವರು ಇದ್ದರು. ಮೃತ ಯುವಕರನ್ನು ತಾಲೂಕಿನ ಹುಣಶೆಟ್ಟಿಕೊಪ್ಪದ ದರ್ಶನ ಹಾಗೂ ರಾಮನಕೊಪ್ಪದ ರಾಜು ಭಂಡಾರಿ ಎಂದು ಗುರುತಿಸಲಾಗಿದ್ದು, ಇನ್ನೋರ್ವ ಸವಾರ ಜಾಬೀರ್‌ ಗಂಭೀರವಾಗಿ ಗಾಯಗೊಂಡಿರುತ್ತಾನೆ.ಈತನ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ.

ಹೋಟೆಲ್‌ ಮುಂಭಾಗ ರಸ್ತೆ ಬದಿಯಲ್ಲಿ ನಿಲ್ಲಿಸಿಟ್ಟಿದ್ದ ಇನೋವಾ ಕಾರ್‌ ಗೆ ಹಿಂಭಾಗದಿಂದ ಬೈಕ್‌ ಸವಾರರು ವಿರುದ್ಧ ದಿಕ್ಕಿನಲ್ಲಿ ಬಂದು ಗುದ್ದಿದ್ದು, ಅಪಘಾತದ ಪರಿಣಾಮವಾಗಿ ಇಬ್ಬರು ಸ್ಥಳದಲ್ಲೇ ದಾರುಣ ಸಾವು ಕಂಡಿದ್ದಾರೆ. ಇನ್ನೋರ್ವನನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಗೆ ಕರೆದೊಯ್ಯಲಾಗಿದೆ.

ಇದನ್ನೂ ಓದಿ: Vijayapura: ಸಮುದ್ರದ ಮರಳು, ಲಿಂಬೆ ಹಣ್ಣಿನಲ್ಲಿ ಅರಳಿದ ದೇವಿ

Advertisement

Udayavani is now on Telegram. Click here to join our channel and stay updated with the latest news.

Next