Advertisement

Karwar To Banavasiಸರ್ಕಾರಿ ಬಸ್‌ನಲ್ಲಿ ಪ್ರಯಾಣಿಸಿ ಸರಳತೆ ಮೆರೆದ ಜಿಲ್ಲಾಧಿಕಾರಿ ಗಂಗೂಬಾಯಿ

09:53 PM Oct 10, 2023 | Team Udayavani |

ಕಾರವಾರ : ಬನವಾಸಿಯಲ್ಲಿ ಮಂಗಳವಾರ ನಡೆದ ಜಿಲ್ಲಾಧಿಕಾರಿ ಅವರ ಜನತಾದರ್ಶನ ಕಾರ್ಯಕ್ರಮಕ್ಕೆ ತಮ್ಮ ಅಧಿಕೃತ ಸರ್ಕಾರಿ ವಾಹನ ಬಿಟ್ಟು, ಸಾರಿಗೆ ಸಂಸ್ಥೆಯ ಸಾಮಾನ್ಯ ಬಸ್‌ನಲ್ಲಿ ಕಾರವಾರದಿಂದ ಬನಬಾಸಿತನಕ
ತೆರಳಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸರಳತೆ ಮೆರೆದರು.

Advertisement

ಜಿಲ್ಲಾಧಿಕಾರಿ ಅವರೊಂದಿಗೆ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕಾರವಾರ ದಿಂದ ಸರ್ಕಾರಿ ಬಸ್ ಮೂಲಕ ತೆರಳಿದ್ದು, ಜಿಲ್ಲಾಧಿಕಾರಿ ಮತ್ತು ಪುರುಷ ಅಧಿಕಾರಿಗಳು ಬಸ್ ಟಿಕೆಟ್ ದರ ಪಾವತಿಸಿದರೆ , ಮಹಿಳಾ ಅಧಿಕಾರಿಗಳು ಶಕ್ತಿ ಯೋಜನೆಯ ಸೌಲಭ್ಯ ಪಡೆದುಕೊಂಡರು.

ಸರ್ಕಾರಕ್ಕೆ ಅನಾವಶ್ಯಕ ಖರ್ಚುಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಹಾಗೂ ಪರಿಸರ ಮಾಲಿನ್ಯ ಕಡಿಮೆ ಮಾಡುವ ಸಲುವಾಗಿ ಎಲ್ಲಾ ಅಧಿಕಾರಿಗಳು ತಮ್ಮ ಸರಕಾರಿ ವಾಹನವನ್ನು ಉಪಯೋಗಿಸದೇ, ಸರ್ಕಾರಿ ಬಸ್ ಮೂಲಕವೇ ಪ್ರಯಾಣಿಸಿದರು.

ಬಸ್‌ನಲ್ಲಿ ಸಂಚರಿಸುವ ಮೂಲಕ ಪ್ರತಿದಿನ ಬಸ್ ಮೂಲಕ ಕಚೇರಿಗಳಿಗೆ ಅಗಮಿಸಿ ವಿವಿಧ ಸಮಸ್ಯೆಗೆ ಪರಿಹಾರ ಕೋರುವ ನಾಗರಿಕರ ಕಷ್ಟ ಅಧಿಕಾರಿಗಳಿಗೆ ತಿಳಿಯಲಿದೆ. ಅಲ್ಲದೆ ಎಲ್ಲಾ ಅಧಿಕಾರಿಗಳು ಒಂದೇ ವಾಹನದಲ್ಲಿ ಪ್ರಯಾಣಿಸುವ ಮೂಲಕ ಪರಸ್ಪರ ವಿವಿಧ ಇಲಾಖಾ ಸಮಸ್ಯೆಗಳನ್ನು ಸಮನ್ವಯದ ಮೂಲಕ ಬಗೆಹರಿಸಿಕೊಳ್ಳಲೂ ಕೂಡಾ ಸಾಧ್ಯವಾಗಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next