Advertisement

ಕಸಾಪ ಚಟುವಟಿಕೆ ವಿಸ್ತರಿಸುವ ಗುರಿ

12:04 PM Nov 28, 2021 | Team Udayavani |

ಇಳಕಲ್ಲ: ಎಲ್ಲರ ಸಲಹೆ, ಸಹಕಾರ ಪಡೆದುಕೊಂಡು ಜನಸಾಮಾನ್ಯದವರೆಗೆ ಕಸಾಪ ಚಟುವಟಿಕೆಗಳನ್ನು ವಿಸ್ತರಿಸುವ ಗುರಿ ಹೊಂದಿದ್ದೇನೆ ಎಂದು ಕನ್ನಡ ಸಾಹಿತ್ಯ ಪರಿಷತ್‌ನ ಜಿಲ್ಲಾ ಘಟಕದ ನೂತನ ಅಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಹೇಳಿದರು.

Advertisement

ನಗರದ ದೇವಾಂಗ ಸಂಘದ ಆರ್‌. ವೀರಮಣಿ ಸಾಂಸ್ಕೃತಿಕ ಭವನದಲ್ಲಿ ನಗರದ ವಿವಿಧ ಸಂಘಟನೆಗಳ ಹಾಗೂ ಸಾಹಿತ್ಯಾಸಕ್ತರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್‌ನ ಸದಸ್ಯರು ಕನ್ನಡದ ಸೇವೆ ಮಾಡುವ ಜವಾಬ್ದಾರಿ ವಹಿಸಿಕೊಟ್ಟಿದ್ದಾರೆ. ನಿರೀಕ್ಷೆ ಮೀರಿ ಬೆಂಬಲ ನೀಡಿದ್ದಾರೆ. ಅವರ ವಿಶ್ವಾಸಕ್ಕೆ ಚ್ಯುತಿ ಬರದಂತೆ ಕೆಲಸ ಮಾಡುತ್ತೇನೆ. ಕನ್ನಡ ಭವನ ಇಲ್ಲದ 6 ತಾಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣ, ಉದಯೋನ್ಮುಖ ಲೇಖಕರ ಪುಸ್ತಕಗಳ ಪ್ರಕಟಣೆ, ಯುವ ಸಾಹಿತಿಗಳಿಗಾಗಿ ಕಥೆ ಹಾಗೂ ಕಾವ್ಯ ಕಮ್ಮಟ, ಕಾರ್ಯಾಗಾರ, ವಿಚಾರ ಸಂಕಿರಣ ಆಯೋಜಿಸಲಾಗುವುದು. ಬಾಗಲಕೋಟೆಯಲ್ಲಿ ಅಖೀಲ ಭಾರತ ಸಾಹಿತ್ಯ ಸಮ್ಮೇಳನ ಆಯೋಜನೆ, ದತ್ತಿನಿಧಿ ಕಾರ್ಯಕ್ರಮ ಆಯೋಜಿಸಲಾಗುವುದು. ವಿದ್ಯಾರ್ಥಿಗಳು, ಜನಸಾಮಾನ್ಯರ ಪಾಲ್ಗೊಳ್ಳುವಿಕೆ ಹೆಚ್ಚಿಸುವ ಕಾರ್ಯಕ್ರಮ ಸಂಘಟಿಸುವುದಾಗಿ ಕಸಾಪ ಜಿಲ್ಲಾಧ್ಯಕ್ಷ ಶೆಲ್ಲಿಕೇರಿ ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ವಿಶ್ವನಾಥ ವಂಶಾಕೃತಮಠ, ಸ್ನೇಹರಂಗದ ಅಧ್ಯಕ್ಷ ಬಸವರಾಜ ಮಠದ, ನೌಕರರ ಸಂಘದ ತಾಲೂಕು ಅಧ್ಯಕ್ಷ ಪರಶುರಾಮ ಪಮ್ಮಾರ, ರಾಮನಗೌಡ ಸಂದಿಮನಿ, ಮಲ್ಲಿಕಾರ್ಜುನ ಅಂಗಡಿ, ಮಂಜುನಾಥ ಬೆಳವಣಿಕಿ ಮಾತನಾಡಿದರು. ಮಹಾದೇವ ಕಂಬಾಗಿ, ಸಿ.ಎಸ್‌. ಶಾಸ್ತ್ರಿ, ಜಾಕೀರಹುಸೇನ ಗಡೇದ, ಶಿವಾನಂದ ಕೊರಿ, ಮುತ್ತು ಬೀಳಗಿ, ಸಿದ್ದರಾಮ ಶಿರೋಳ, ಹೂಲಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next