Advertisement

ಅಕ್ಕಯ್ಯ ಪದ್ಮಶಾಲಿ ಮತ್ತು ಮನೋಹರ ಚಂದ್ರ ಅವರಿಗೆ ಕಸಾಪ ದತ್ತಿ ಪ್ರಶಸ್ತಿ

08:09 PM Apr 21, 2022 | Team Udayavani |

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನೀಡುವ 2022ನೇ ಸಾಲಿನ ಫಾದರ್‌ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಗೆ ಸಾಮಾಜಿಕ ಕಾರ್ಯಕರ್ತರಾದ ಡಾ. ಅಕ್ಕಯ್ಯ ಪದ್ಮಶಾಲಿ ಮತ್ತು ರೆವರೆಂಡ್‌ ಡಾ.ಡಿ. ಮನೋಹರಚಂದ್ರ ಪ್ರಸಾದ್‌ ಆಯ್ಕೆಯಾಗಿದ್ದಾರೆ.

Advertisement

ಕಸಾಪ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ  ಸದಸ್ಯರಾದ ಕನ್ನಡಪರ ಚಿಂತಕಿ ರೀಟಾ ರೀನಿ, ರಫಾಯಲ್‌ ರಾಜ್‌, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ನೇ.ಭ ರಾಮಲಿಂಗಶೆಟ್ಟಿ, ಗೌರವ ಕೋಶಾಧ್ಯಕ್ಷ ಬಿ.ಎಂ. ಪಟೇಲ್‌ಪಾಂಡು ಇವರ ಸರ್ವಾನುಮತದಿಂದ ಆಯ್ಕೆಮಾಡಲಾಗಿದೆ.

ಈ ದತ್ತಿ ಪ್ರಶಸ್ತಿಯು ತಲಾ 10 ಸಾವಿರ ರೂ.ನಗದು, ಸ್ಮರಣಿಕೆ ಮತ್ತು ಫ‌ಲ ತಾಂಬೂಲಗಳನ್ನು ಹೊಂದಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next