Advertisement
ಅದರಂತೆ ಚುನಾವಣೆ ಇನ್ನೂ ಮೂರು ತಿಂಗಳು ಬಾಕಿ ಉಳಿದಿದ್ದು, ಅದಾಗಲೇ ಆಕಾಂಕ್ಷಿಗಳು ಸ್ಪರ್ಧೆಗೆ ಸಜ್ಜಾಗಿ ನಿಂತಿದ್ದಾರೆ. ತಮ್ಮ-ತಮ್ಮ ಬೆಂಬಲಿಗರ ಜತೆ ಸರಣಿ ಸಭೆಗಳು ನಡೆಸುವ ಮೂಲಕ ತಮ್ಮ ಸ್ಪರ್ಧೆ ಬಗ್ಗೆ ಖಚಿತಪಡಿಸುತ್ತಿದ್ದಾರೆ. ಅಷ್ಟೇ ಅಲ್ಲ ಸದಸ್ಯ ಮತದಾರರರಿಗೆ ನೇರ ಮತ್ತು ಮೊಬೈಲ್ ಮೂಲಕ ಸಂಪರ್ಕಿಸಿ ಪ್ರಚಾರಕ್ಕೂ ಸಹ ಚಾಲನೆ ಕೊಟ್ಟಿದ್ದಾರೆ. ಹಾಗಾಗಿ ಈ ಸಲ ಕಸಾಪ ಸಾರಥಿ ಯಾರು ಆಗಬಹುದು ಎಂಬ ಕುತೂಹಲ ಹೆಚ್ಚಿಸಿದೆ.
ಪರೀಕ್ಷೆಗೆ ಕಣಕ್ಕಿಳಿಯಲು ಸಜ್ಜಾಗುತ್ತಿದ್ದಾರೆ. ಇವರೊಟ್ಟಿಗೆ ಕರುನಾಡು ಸಾಂಸ್ಕೃತಿ ವೇದಿಕೆ ಅಧ್ಯಕ್ಷ ಡಾ| ಸಂಜುಕುಮಾರ ಅತಿವಾಳೆ ಅವರ ಹೆಸರು ಸಹ ಕೇಳಿ ಬರುತ್ತಿದೆ. ಮತದಾರರನ್ನು ಸೆಳೆಯಲು ಸಾಹಿತಿಗಳ ಗುಂಪುಗಳು ತಂತ್ರಗಾರಿಕೆ ಹೆಣೆಯಲು ಆರಂಭಿಸಿವೆ. ಬೀದರ ಜಿಲ್ಲಾ ಕಸಾಪ ಅಂದಾಜು 15 ಸಾವಿರ ಸದಸ್ಯರನ್ನು ಹೊಂದಿದ್ದು, ಈ ಪೈಕಿ 6 ಸಾವಿರದಷ್ಟು ಸದಸ್ಯರು ಬೀದರ ತಾಲೂಕಿನಲ್ಲೇ ಇದ್ದಾರೆ. ಬುದ್ಧಿವಂತರ ಚುನಾವಣೆ ಎನಿಸಿಕೊಂಡಿರುವ ಪರಿಷತ್ ಚುನಾವಣೆಗೂ ಸಹ ರಾಜಕೀಯ ಲೇಪ ಪಡೆಯುತ್ತಿರುವುದರಿಂದ ಅಖಾಡ ಹೆಚ್ಚು ರಂಗೇರಲು ಕಾರಣವಾಗುತ್ತಿದೆ. ಮತದಾನದ ದಿನಗಳು ಸಮೀಪಿಸುತ್ತಿದ್ದಂತೆ “ವೋಟಿಗಾಗಿ ನೋಟು’ ವ್ಯವಸ್ಥೆ ಸಹ ಹೆಚ್ಚುತ್ತಿದೆ.
Related Articles
ನಿರ್ಣಯ ಕೈಗೊಳ್ಳುತ್ತೇನೆ.”
Advertisement
ಡಾ| ಸಂಜೀವಕುಮಾರ ಅತಿವಾಳೆ,ಹಿರಿಯ ಸಾಹಿತಿ
ನನ್ನ ಅಧ್ಯಕ್ಷ ಅವಧಿಯಲ್ಲಿ ಕನ್ನಡ ಕಟ್ಟುವ ಚಟುವಟಿಕೆಗಳನ್ನು ನಿರಂತರವಾಗಿ ನಡೆದಿವೆ. ಸಾಹಿತ್ಯಾಸಕ್ತರ ಸ್ವಾಭಿಮಾನದ ಹೆಗ್ಗುರುತಾಗಿರುವ ಜಿಲ್ಲಾ ಕನ್ನಡ ಭವನ ನಿರ್ಮಾಣ ಆಗಬೇಕಿದೆ. ಜಿಲ್ಲೆಯ ಎರಡ್ಮೂರು ತಾಲೂಕು ಕೇಂದ್ರಗಳಲ್ಲಿ ಭವನಕ್ಕೆ ನಿವೇಶನ ಮಂಜೂರಾತಿ ಅಂತಿಮ ಹಂತದಲ್ಲಿವೆ. ಈ ಮಹತ್ವದ ಕೆಲಸಗಳು ಆಗಬೇಕಾದರೆ ಇನ್ನೊಂದು ಅವ ಧಿಗೆ ಮುಂದುವರೆಯಬೇಕೆಂಬುದು ಎಲ್ಲರ ಒತ್ತಡ ಇದೆ. ಹಾಗಾಗಿ ಸ್ಪರ್ಧೆಗೆ ಮನಸ್ಸು ಮಾಡಿದ್ದೇನೆ. ಶೀಘ್ರ ಸಭೆ ನಡೆಸಿ ಸ್ಪರ್ಧೆ ಬಗ್ಗೆ ನಿರ್ಣಯ ಪ್ರಕಟಿಸುತ್ತೇನೆ.
ಸುರೇಶ ಚನಶೆಟ್ಟಿ, ಜಿಲ್ಲಾ ಕಸಾಪ ಅಧ್ಯಕ್ಷ
ಕಳೆದ ಬಾರಿ ಜಿಲ್ಲಾ ಕಸಾಪ ಚುನಾವಣೆಗೆ ಸ್ಪರ್ಧಿಸುವಂತೆ ಬಹಳಷ್ಟು ಒತ್ತಡ ಇತ್ತು. ಹಾಗಾಗಿ ಈ ಬಾರಿ ಕಣಕ್ಕಿಳಿಯಲು ನಿಶ್ಚಯಿಸಿದ್ದೇನೆ. ತಾಯಿ ಭುವನೇಶ್ವರಿಯ ಸೇವೆ, ಕನ್ನಡದ ಚಟುವಟಿಕೆ ನಡೆಸಲು ನನಗೆ ಅವಕಾಶ ಸಿಗುವ ವಿಶ್ವಾಸ ಇದೆ. ನಿಗದಿತ ಅವಧಿಯಲ್ಲಿ ಕನ್ನಡ ಭವನ ನಿರ್ಮಾಣದ ಜತೆಗೆ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ, ಅಂತಾರಾಷ್ಟ್ರೀಯ ಜಾನಪದ ಸಮ್ಮೇಳನ ಸಂಘಟಿಸುವುದು ಸ್ಥಳೀಯ ಸಾಹಿತಿ, ಕಲಾವಿದರನ್ನು ರಾಜ್ಯ-ರಾಷ್ಟ್ರ ಮಟ್ಟದಲ್ಲಿಅವಕಾಶ ಕಲ್ಪಿಸಲು ಪ್ರಯತ್ನಿಸುವುದು ತಮ್ಮ ಆಶಯ. ಡಾ| ರಾಜಕುಮಾರ ಹೆಬ್ಟಾಳೆ,ಜಿಲ್ಲಾ ಕಸಾಪ ಕಾರ್ಯದರ್ಶಿ