Advertisement

ಪಕ್ಷಾತೀತವಾಗಿ ಕಸಾಪ ಬೆಳೆಸಿ

01:24 PM Nov 08, 2021 | Team Udayavani |

ಭಾಲ್ಕಿ: ಪರಿಣಿತರು ಹೇಳಿದಂತೆ ರಾಜಕೀಯ ರಹಿತ ಧರ್ಮವಿರಬೇಕೆ ಹೊರತು ಧರ್ಮದಲ್ಲಿ ರಾಜಕೀಯ ಬೆರೆಸಬಾರದು. ಅದೇ ತೆರನಾಗಿ ಕನ್ನಡ ಸಾಹಿತ್ಯ ಪರಿಷತ್‌ ಸಹ ಪಕ್ಷಾತೀತವಾಗಿ ಬೆಳೆಸುವವರಿಗೆ ನನ್ನ ಬೆಂಬಲ, ಸಹಕಾರ ಪ್ರೋತ್ಸಾಹವಿದೆ ಎಂದು ಮಾಜಿ ಶಾಸಕ ಪ್ರಕಾಶ ಖಂಡ್ರೆ ಹೇಳಿದರು.

Advertisement

ತಾಲೂಕಿನ ಬಾಜೋಳಗಾ ಕ್ರಾಸ್‌ ಹತ್ತಿರದ ಭಾಲ್ಕೇಶ್ವರ ಶುಗರ್ನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಡಾ| ರಾಜಕುಮಾರ ಹೆಬ್ಟಾಳೆ ಅವರ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಡಾ| ಜಗನ್ನಾಥ ಹೆಬ್ಟಾಳೆಯವರು ಈ ಹಿಂದೆ ಕಸಾಪ ಜಿಲ್ಲಾಧ್ಯಕ್ಷರಾಗಿ ಉತ್ತಮ ಕಾರ್ಯ ಮಾಡಿದ್ದಾರೆ. ಪ್ರಸ್ತುತವಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ರಾಜಕುಮಾರ ಹೆಬ್ಟಾಳೆ ಅವರಿಗೂ ನಮ್ಮ ಬೆಂಬಲವಿದೆ. ನಾನು ಶಾಸಕನಿದ್ದಾಗ ಪರಿಷತ್ತಿನ ಎಲ್ಲ ಚಟುವಟಿಕೆಗಳಿಗೆ ಸಹಕಾರ ನೀಡಿದ್ದೇನೆ. ಮುಂದೆಯೂ ನೀಡುತ್ತೇನೆ ಎಂದರು.

ಈ ವೇಳೆ ಜಿಲ್ಲಾ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಡಾ| ಜಗನ್ನಾಥ ಹೆಬ್ಟಾಳೆ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶಂಭುಲಿಂಗ ಕಾಮಣ್ಣ, ನಾಗರಾಜ ಮಡ್ಡೆರ, ಗೋವಿಂದರಾವ ಬಿರಾದಾರ, ಮಲ್ಲಿಕಾರ್ಜುನ ಸ್ವಾಮಿ, ಪ್ರಕಾಶ ಕನ್ನಾಳೆ ಸೇರಿದಂತೆ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next