Advertisement

Kasaragod: ಸಚಿತಾ ರೈ ವಿರುದ್ಧ ಇನ್ನೊಂದು ಕೇಸು ದಾಖಲು

08:05 PM Oct 27, 2024 | Team Udayavani |

ಕಾಸರಗೋಡು: ಕೇಂದ್ರ-ರಾಜ್ಯ ಸರಕಾರಗಳ ಸಂಸ್ಥೆಗಳಲ್ಲಿ ಉದ್ಯೋಗ ದೊರಕಿಸಿಕೊಡುವ ಭರವಸೆ ನೀಡಿ ಹಲವರಿಂದ ಲಕ್ಷಾಂತರ ರೂ. ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಡಿವೈಎಫ್‌ಐ ಮಾಜಿ ನೇತಾರೆ, ಅಧ್ಯಾಪಕಿ ಶೇಣಿ ಬಲ್ತಕಲ್ಲು ನಿವಾಸಿ ಸಚಿತಾ ರೈ (27) ವಿರುದ್ಧ ಬದಿಯಡ್ಕ ಪೊಲೀಸರು ಇನ್ನೊಂದು ಕೇಸು ದಾಖಲಿಸಿದ್ದಾರೆ.

Advertisement

ಪಳ್ಳತ್ತಡ್ಕ ನೆಲ್ಲಿಕಳಯ ನಿವಾಸಿ ಅರವಿಂದಾಕ್ಷನ್‌ ಅವರ ಪುತ್ರಿ ಅಮೃತಾ (28) ನೀಡಿದ ದೂರಿನಂತೆ ಕೇಸು ದಾಖಲಿಸಲಾಗಿದೆ. ಸಿಪಿಸಿಆರ್‌ಐಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ 12,71,000 ರೂ. ಪಡೆದು ವಂಚಿಸಿದ್ದಾಗಿ ದೂರು ನೀಡಿದ್ದರು. ಈ ಕೇಸು ದಾಖಲಾಗುವುದರೊಂದಿಗೆ ಆಕೆಯ ಮೇಲೆ ವಿವಿಧ ಠಾಣೆಗಳಲ್ಲಿ ಒಟ್ಟು 13 ಪ್ರಕರಣಗಳು ದಾಖಲಾದಂತಾಗಿದೆ

Advertisement

Udayavani is now on Telegram. Click here to join our channel and stay updated with the latest news.

Next