Advertisement

Kasaragod; ಚುನಾವಣಾ ತಕರಾರು : ವಿಚಾರಣೆ ಮಾ.7 ಕ್ಕೆ ಮುಂದೂಡಿಕೆ

06:11 PM Feb 09, 2024 | Team Udayavani |

ಕಾಸರಗೋಡು: ಮಂಜೇಶ್ವರ ವಿಧಾನಸಭೆಗೆ ಕಳೆದ ಬಾರಿ ನಡೆದ ಚುನಾವಣೆಯಲ್ಲಿ ಬಿಎಸ್‌ಪಿ ಅಭ್ಯರ್ಥಿ ಸುಂದರ ಅವರಿಗೆ ಲಂಚ ನೀಡಿ ಅವರ ನಾಮಪತ್ರ ಹಿಂತೆಗೆದುಕೊಳ್ಳುವಂತೆ ಮಾಡಲಾಗಿದೆ ಎಂದು ಆರೋಪಿಸಿ ನೀಡಲಾದ ದೂರಿನಂತೆ ದಾಖಲಿಸಲಾದ ಪ್ರಕರಣವನ್ನು ರದ್ದುಪಡಿಸಬೇಕೆಂದು ಕೋರಿ ಪ್ರತಿವಾದಿಗಳಾದ ಬಿಜೆಪಿ ರಾಜ್ಯ ಅಧ್ಯಕ್ಷ ಕೆ.ಸುರೇಂದ್ರನ್‌ ಸಹಿತ ಇತರ 5 ಮಂದಿ ಸಲ್ಲಿಸಿದ ಅರ್ಜಿಯ ಪರಿಶೀಲನೆಯನ್ನು ಕಾಸರಗೋಡು ಪ್ರಿನ್ಸಿಪಲ್‌ ಜಿಲ್ಲಾ ಸೆಶನ್ಸ್‌ ನ್ಯಾಯಾಲಯ ಮತ್ತೆ ಮುಂದೂಡಿದೆ.

Advertisement

ಇದರಂತೆ ಮಾರ್ಚ್‌ 7 ಕ್ಕೆ ಅರ್ಜಿಯನ್ನು ನ್ಯಾಯಾಲಯ ಪರಿಶೀಲಿಸಲಿದೆ.

 

Advertisement

Udayavani is now on Telegram. Click here to join our channel and stay updated with the latest news.

Next