Advertisement

Kasaragod ವಿದ್ಯಾರ್ಥಿ ಸಾವು ಪ್ರಕರಣ: ಸರಕಾರದಿಂದ ಸ್ಪಷ್ಟೀಕರಣ ಕೇಳಿದ ಹೈಕೋರ್ಟ್‌

09:14 PM Apr 13, 2024 | Team Udayavani |

ಕಾಸರಗೋಡು: ಪೊಲೀಸರು ಹಿಂಬಾಲಿಸುತ್ತಿದ್ದ ವೇಳೆ ಕಾರು ಮಗುಚಿ ಬಿದ್ದು ವಿದ್ಯಾರ್ಥಿ ಸಾವಿಗೀಡಾದ ಘಟನೆ ಬಗ್ಗೆ ಹೈಕೋರ್ಟ್‌ ರಾಜ್ಯ ಸರಕಾರದಿಂದ ಸ್ಪಷ್ಟೀಕರಣ ಕೇಳಿದೆ.

Advertisement

ಕಳೆದ ವರ್ಷ ಆ.25ರಂದು ಅಂಗಡಿಮೊಗರು ಸರಕಾರಿ ಹೈಯರ್‌ ಸೆಕೆಂಡರಿ ಶಾಲೆಯ ಪ್ಲಸ್‌ ಟು ವಿದ್ಯಾರ್ಥಿ ಕುಂಬಳೆ ಪೇರಾಲ್‌ ಕಣ್ಣೂರು ನಿವಾಸಿ ಫರ್ಹಾಸ್‌(17) ಶಾಲೆಯಲ್ಲಿ ನಡೆದ ಓಣಂ ಕಾರ್ಯಕ್ರಮದಲ್ಲಿ ಭಾಗವಹಿಸಿ ಸ್ನೇಹಿತರ ಜತೆ ಕಾರಿನಲ್ಲಿ ಮರಳುತ್ತಿದ್ದರು. ಆಗ ಆ ದಾರಿಯಾಗಿ ಬಂದ ಪೊಲೀಸರು ಯಾವುದೋ ಅನುಮಾನದಿಂದ ಆ ಕಾರನ್ನು ತಮ್ಮ ವಾಹನದಲ್ಲಿ ಹಿಂಬಾಲಿಸಿರುವುದಾಗಿ ಆರೋಪಿಸಲಾಗಿತ್ತು. ಆ ವೇಳೆ ಆ ಕಾರು ಅಪಘಾತಕ್ಕೀಡಾಗಿ ಅದರಲ್ಲಿದ್ದ ಫರ್ಹಾಸ್‌ ಗಂಭೀರ ಗಾಯಗೊಂಡು ಬಳಿಕ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೇ ಆ.29ರಂದು ಸಾವು ಸಂಭವಿಸಿತ್ತು.

ಆ ಘಟನೆಗೆ ಸಂಬಂಧಿಸಿ ಕಾರನ್ನು ಹಿಂಬಾಲಿಸಿದ ಪೊಲೀಸರ ವಿರುದ್ಧ ಇಲಾಖಾ ಮಟ್ಟದ ತನಿಖೆ ನಡೆಸಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಮಾತ್ರವಲ್ಲದೆ, ನಷ್ಟ ಪರಿಹಾರವನ್ನೂ ನೀಡಬೇಕೆಂದು ಕೋರಿ ಮೃತ ಫರ್ಹಾಸ್‌ನ ತಾಯಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅದನ್ನು ಪರಿಶೀಲಿಸಿದ ಹೈಕೋರ್ಟ್‌ ಆ ಬಗ್ಗೆ ಸ್ಪಷ್ಟೀಕರಣ ನೀಡುವ ಅಫಿದವಿತ್‌ ಸಲ್ಲಿಸುವಂತೆ ರಾಜ್ಯ ಸರಕಾರದ ಕಾರ್ಯದರ್ಶಿ ಮತ್ತು ಕಾಸರಗೋಡು ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next