Advertisement

ಕಾಸರಗೋಡು ಜಿಲ್ಲೆ: ಒಬ್ಬರಿಗೆ ಸೋಂಕು ದೃಢ

02:21 AM May 01, 2020 | Sriram |

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಗುರುವಾರ ಒಬ್ಬರಿಗೆ ಕೋವಿಡ್‌-19 ವೈರಸ್‌ ಸೋಂಕು ದೃಢಗೊಂಡಿದೆ. ಇದೇ ವೇಳೆ ಕಾಂಞಂಗಾಡ್‌ನ‌ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಗುಣಮುಖರಾಗಿ ಮನೆಗೆ ಮರಳಿದ್ದಾರೆ.

Advertisement

ಕಾಸರಗೋಡು ಜಿಲ್ಲೆಯಲ್ಲಿ ಇದು ವರೆಗೆ 179 ಮಂದಿಗೆ ಕೋವಿಡ್‌-19 ಸೋಂಕು ಬಾಧಿಸಿದ್ದು, 167 ಮಂದಿ ಗುಣಮುಖರಾಗಿದ್ದಾರೆ. 12 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲಾಧಿಕಾರಿ ನಿಗಾದಲ್ಲಿ
ಕೋವಿಡ್‌-19 ಬಾಧಿಸಿದ ದೃಶ್ಯ ಮಾಧ್ಯಮ ವರದಿಗಾರನೊಂದಿಗಿನ ಸಂಪರ್ಕದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೋವಿಡ್‌ ನಿಯಂತ್ರಣಕ್ಕೆ ನೇತೃತ್ವ ನೀಡಿದ ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ಬಾಬು, ಐ.ಜಿ.ಗಳಾದ ಅಶೋಕ ಯಾದವ್‌, ವಿಜಯ್‌ ಸಖಾರೆ ಅವರನ್ನು ಕ್ವಾರಂಟೈನ್‌ಗೊಳಿಸಲಾಗಿದೆ. ಜಿಲ್ಲಾಧಿಕಾರಿಯ ಗನ್‌ಮ್ಯಾನ್‌ ಹಾಗೂ ಚಾಲಕರನ್ನೂ ನಿಗಾದಲ್ಲಿಡಲಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ತಿಳಿಸಿದ್ದಾರೆ. ಡಾ| ಸಜಿತ್‌ ಬಾಬು ಅವರ ಗಂಟಲದ್ರವ ಮಾದರಿ ತಪಾಸಣೆಯ ಫಲಿತಾಂಶ ನೆಗೆಟಿವ್‌ ಬಂದಿದೆ.

ಕೇರಳ: 14 ಮಂದಿ ಗುಣಮುಖ
ಕಾಸರಗೋಡು ಮತ್ತು ಮಲಪ್ಪುರ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಸೇರಿದಂತೆ ಕೇರಳ ರಾಜ್ಯದಲ್ಲಿ ಗುರುವಾರ ಇಬ್ಬರಿಗೆ ಕೋವಿಡ್‌-19 ಬಾಧಿಸಿದೆ. ಇದೇ ಸಂದರ್ಭದಲ್ಲಿ 14 ಮಂದಿ ಗುಣಮುಖರಾಗಿದ್ದಾರೆ. ರೋಗ ಬಾಧಿತರಲ್ಲಿ ಒಬ್ಬರು ಮಹಾರಾಷ್ಟ್ರದಿಂದ ಬಂದವರಾಗಿದ್ದರೆ, ಇನ್ನೊಬ್ಬರಿಗೆ ಸಂಪರ್ಕದಿಂದ ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next