Advertisement

ಕಾಶೀ ಮಠಾಧೀಶ ಚಾತುರ್ಮಾಸ್ಯ ವ್ರತ ಆರಂಭ

01:00 PM Aug 04, 2018 | Harsha Rao |

ಮಂಗಳೂರು: ಗೌಡ ಸಾರಸ್ವತ ಸಮಾಜದ ಶ್ರೀ ಕಾಶೀಮಠ ಸಂಸ್ಥಾನದ ಮಠಾಧೀಶರಾದ ಶ್ರೀಮತ್‌ ಸಂಯಮೀಂದ್ರ ತೀರ್ಥ ಸ್ವಾಮೀಜಿ ಯವರ ಚಾತುರ್ಮಾಸ್ಯ ವ್ರತವು ತಿರುಪತಿಯ ತಿರುಮಲ ಬೆಟ್ಟದಲ್ಲಿರುವ ಶ್ರೀ ಕಾಶಿ ಮಠ ಸಂಸ್ಥಾನದ ಶಾಖಾ ಮಠದಲ್ಲಿ ಗುರುವಾರ ಮೃತಿಕಾ ಪೂಜನೆಯೊಂದಿಗೆ ಪ್ರಾರಂಭ ವಾಯಿತು. ಪ್ರಾತಃಕಾಲ ಶ್ರೀ ಸಂಸ್ಥಾನದ ಶ್ರೀ ದೇವರುಗಳ ಬಿಂಬಗಳಿಗೆ ಪಂಚಾಮೃತ, ಗಂಗಾಭಿಷೇಕ, ಲಘು ವಿಷ್ಣು ಅಭಿಷೇಕ, ಶತಕಲಶಾಭಿಷೇಕ ಬಳಿಕ ಪವಮಾನ ಅಭಿಷೇಕಗಳನ್ನು ಸ್ವಾಮೀಜಿ ಯವರು ನೆರವೇರಿಸಿದರು. ಬಳಿಕ ನೆರೆದ ಸಮಾಜ ಬಾಂಧವರಿಗೆ ತಪ್ತಮುದ್ರಾಧಾರಣೆ ನಡೆಯಿತು. ಸಂಜೆ ಸಭಾ ಕಾರ್ಯಕ್ರಮ ಜರಗಿತು.

Advertisement
Advertisement

Udayavani is now on Telegram. Click here to join our channel and stay updated with the latest news.

Next