Advertisement

ವಿಲನ್‌ ಗೆಟಪ್‌ ನಲ್ಲಿ ಕಾಶಿನಾಥ್‌ ಪುತ್ರ ಅಭಿಮನ್ಯು

06:27 PM Feb 20, 2023 | Team Udayavani |

ಹಿರಿಯ ನಟ ಕಂ ನಿರ್ದೇಶಕ ಕಾಶಿನಾಥ್‌ ಅವರ ಪುತ್ರ ಅಭಿಮನ್ಯು ಈ ಬಾರಿ ವಿಲನ್‌ ಲುಕ್‌ನಲ್ಲಿ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ.

Advertisement

ಸದ್ಯ ಅಭಿಮನ್ಯು, “ಎಲ್ಲಿಗೆ ಪಯಣ ಯಾವುದೋ ದಾರಿ’ ಥ್ರಿಲ್ಲರ್‌ ಸಿನಿಮಾದಲ್ಲಿ ವಿಲನ್‌ ಆಗಿ ಅಭಿನಯಿಸುತ್ತಿದ್ದು, ಮಹಾಶಿವರಾತ್ರಿ ಹಬ್ಬದ ಶುಭ ಸಂದರ್ಭದಲ್ಲಿ “ಎಲ್ಲಿಗೆ ಪಯಣ ಯಾವುದೋ ದಾರಿ’ ಚಿತ್ರದ ವಿಲನ್‌ ಮೋಶನ್‌ ಪೋಸ್ಟರ್‌ ಬಿಡುಗಡೆಯಾಗಿದೆ.

ನಟ ಸುದೀಪ್‌ ಈ ಸಿನಿಮಾದ ವಿಲನ್‌ ಮೋಶನ್‌ ಪೋಸ್ಟರ್‌ ಅನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. “ಎಲ್ಲಿಗೆ ಪಯಣ ಯಾವುದೋ ದಾರಿ’ ಸಿನಿಮಾಕ್ಕೆ ಕಿರಣ್‌ ಸೂರ್ಯ ನಿರ್ದೇಶನ ಮಾಡುತ್ತಿದ್ದು, 2019ರಲ್ಲಿ ಉಪೇಂದ್ರ ಈ ಸಿನಿಮಾದ ಟೈಟಲ್‌ ಪೋಸ್ಟರ್‌ ಲಾಂಚ್‌ ಮಾಡಿದ್ದರು. ಸದ್ಯ ಈ ಸಿನಿಮಾದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ಭರದಿಂದ ನಡೆಯುತ್ತಿದೆ.

ಇನ್ನೊಂದು ವಿಶೇಷವೆಂದರೆ, ಈ ಸಿನಿಮಾದ ಗೀತೆಯೊಂದಕ್ಕೆ ನಟ ಕಿಚ್ಚ ಸುದೀಪ್‌ ಕೂಡ ಧ್ವನಿಯಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next