Advertisement

ಭಾರತದ ಆಂತರಿಕ ವಿಚಾರದಲ್ಲಿ ಮೂಗು ತೂರಿಸಬೇಡಿ: ಟರ್ಕಿ ವಿರುದ್ಧ ಭಾರತದ ಎಚ್ಚರಿಕೆ

09:52 AM Feb 16, 2020 | Nagendra Trasi |

ನವದೆಹಲಿ: ಜಮ್ಮು-ಕಾಶ್ಮೀರದ ವಿಚಾರದಲ್ಲಿ ಟರ್ಕಿ ಮಧ್ಯಪ್ರವೇಶಿಸುವ ಅಗತ್ಯವಿಲ್ಲ ಎಂದು ಭಾರತ ಎಚ್ಚರಿಕೆಯ ಸಂದೇಶ ರವಾನಿಸಿದ್ದು, ಕಾಶ್ಮೀರ ದೇಶದ ಆಂತರಿಕ ಹಾಗೂ ಅವಿಚ್ಛಿನ್ನ ಭಾಗವಾಗಿದೆ ಎಂದು ಪುನರುಚ್ಚರಿಸಿದೆ.

Advertisement

ಪಾಕ್ ಪ್ರವಾಸ ಕೈಗೊಂಡಿರುವ ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯೀಪ್ ಎರ್ಡೋಗನ್, ಜಮ್ಮು ಕಾಶ್ಮೀರದಲ್ಲಿನ ಸ್ಥಿತಿ ಈಗ ಮೊದಲ ಮಹಾಯುದ್ಧದ ಬಳಿಕದ ಸ್ಥಿತಿ ಇದೆ. ದಶಕಗಳಿಂದ ಸಂಕಷ್ಟ ಅನುಭವಿಸುತ್ತಿರುವ ಜಮ್ಮು ಕಾಶ್ಮೀರದ ಪರಿಸ್ಥಿತಿ ವಿಶೇಷ ಸ್ಥಾನಮಾನ ರದ್ದಾದ ನಂತರ ಬಾಣಲೆಯಿಂದ ನೇರವಾಗಿ ಬೆಂಕಿಗೆ ಬಿದ್ದಂತಾಗಿದೆ. ಕಾಶ್ಮೀರದಲ್ಲಿರುವ ನಮ್ಮ ಸಹೋದರ, ಸಹೋದರಿಯರ ದಬ್ಬಾಳಿಕೆಯಡಿ ಜೀವನ ನಡೆಸುವಂತಾಗಿದೆ ಎಂದು ಟರ್ಕಿ ಅಧ್ಯಕ್ಷ ಅಭಿಪ್ರಾಯವ್ಯಕ್ತಪಡಿಸಿದ್ದರು.

ಟರ್ಕಿ ಅಧ್ಯಕ್ಷ ಎರ್ಡೋಗನ್ ಹೇಳಿಕೆಗೆ ಭಾರತ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಜಮ್ಮು-ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದೆ. ಭಾರತದ ಆಂತರಿಕ ವ್ಯವಹಾರಗಳ ವಿಚಾರದಲ್ಲಿ ಟರ್ಕಿ ಮೂಗು ತೂರಿಸುವ ಅಗತ್ಯವಿಲ್ಲ. ಸತ್ಯಾಂಶ ಏನು ಎಂಬುದನ್ನು ಸರಿಯಾಗಿ ತಿಳಿದುಕೊಳ್ಳಲಿ ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರ ರವೀಶ್ ಕುಮಾರ್ ತಿರುಗೇಟು ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next