Advertisement

ಮಹಾಬಲಿಪುರಂ ಶೃಂಗಸಭೆಯಲ್ಲಿ ಕಾಶ್ಮೀರ ಚರ್ಚೆ ನಡೆದಿಲ್ಲ

09:34 AM Oct 13, 2019 | Team Udayavani |

ಚೆನ್ನೈ: ತಮಿಳುನಾಡಿನ ಮಹಾಬಲಿಪುರಂನಲ್ಲಿ ಮೋದಿ ಮತ್ತು ಕ್ಸಿ ಜಿನ್ ಪಿಂಗ್ ನಡುವೆ ನಡೆದ ಅನೌಪಚಾರಿಕ ಶೃಂಗಸಭೆಯಲ್ಲಿ ಕಾಶ್ಮೀರದ ವಿಚಾರವಾಗಿ ಯಾವುದೇ ಚರ್ಚೆ ನಡೆದಿಲ್ಲ ಎಂದು ವಿದೇಶಾಂಗ ಕಾರ್ಯದರ್ಶಿ ವಿಜಯ್ ಗೋಖಲೆ ಹೇಳಿದ್ದಾರೆ.

Advertisement

ಉಭಯ ದೇಶಗಳ ನಡುವಿನ ಎರಡು ದಿನಗಳ ಶೃಂಗಸಭೆಯ ನಂತರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ವಿಜಯ್ ಗೋಖಲೆ, ‘’ಕಾಶ್ಮೀರ ವಿಚಾರವಾಗಿ ಯಾವುದೇ ಚರ್ಚೆಯಾಗಿಲ್ಲ. ಯಾಕೆಂದರೆ ಅದು ಭಾರತದ ಆಂತರಿಕ ವಿಚಾರ’’ ಎಂದರು.

ಈ ಮೊದಲು ಕೋವಲಂನಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಚೆನ್ನೈ ಮೂಲಕ ಭಾರತ ಮತ್ತು ಚೀನ ದೇಶಗಳ ನಡುವಿನ ಸಂಬಂಧದ ಹೊಸ ಯುಗ ಆರಂಭವಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next