Advertisement

ಕಾಶ್ಮೀರ ವಿಶೇಷ ಸ್ಥಾನ‌: ಸುಪ್ರೀಂ ನೋಟಿಸ್‌

08:30 AM Aug 09, 2017 | Harsha Rao |

ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನದ ಮಾನ್ಯತೆ ಕುರಿತು ಸುಪ್ರೀಂ ಕೋರ್ಟ್‌ ಮಂಗಳವಾರ ಕೇಂದ್ರ ಸರಕಾರದ ಪ್ರತಿಕ್ರಿಯೆ ಕೇಳಿದೆ. 

Advertisement

ಕಣಿವೆ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯ ಮಾನ್ಯತೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ವಜಾ ಮಾಡಿತ್ತು. ಆದರೆ ಅದನ್ನು ಪ್ರಶ್ನಿಸಿ ಕುಮಾರಿ ವಿಜಯಲಕ್ಷ್ಮಿ ಜಾ  ಎಂಬವರು ಸುಪ್ರೀಂ  ಕೋರ್ಟ್‌ ಮೆಟ್ಟಿಲೇರಿದ್ದರು. ಅವರ ಅರ್ಜಿಯ ವಿಚಾರಣೆ ನಡೆಸಿದ ಸಿಜೆಐ ಜೆ.ಎಸ್‌.ಖೆಹರ್‌ ನೇತೃತ್ವದ ನ್ಯಾಯಪೀಠ, ಈ ಕುರಿತು ನಾಲ್ಕು ವಾರಗಳೊಳಗೆ ಪ್ರತಿಕ್ರಿಯಿಸುವಂತೆ ಕೇಂದ್ರ ಸರಕಾರಕ್ಕೆ ನಿರ್ದೇಶಿಸಿದೆ.

ಈ ಹಿಂದೆ ಅಂದರೆ ಎ.11ರಂದು ಅರ್ಜಿಯ ವಿಚಾರಣೆ ನಡೆಸಿದ್ದ ದಿಲ್ಲಿ ಹೈಕೋರ್ಟ್‌, ವಿಶೇಷ ಸ್ಥಾನಮಾನ ವಿಚಾರದಲ್ಲಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಈಗಾಗಲೇ ವಜಾ ಮಾಡಿರುವ ಕಾರಣ ಈ ಬಗ್ಗೆ ಮತ್ತೂಮ್ಮೆ ಪರಿಶೀಲಿಸುವ ಅಗತ್ಯವಿಲ್ಲ ಎಂದು ಹೇಳಿ ಅರ್ಜಿಯನ್ನು ತಿರಸ್ಕರಿಸಿತ್ತು. 

ಅದಕ್ಕೆ ಪ್ರತಿಕ್ರಿಯಿಸಿದ್ದ ಅರ್ಜಿದಾರರು, “ಸುಪ್ರೀಂ ಕೋರ್ಟ್‌ನಲ್ಲಿ ನಡೆದ ವಿಚಾರಣೆ ಮತ್ತು ನಾನು ಹೈಕೋರ್ಟ್‌ನಲ್ಲಿ ಎತ್ತಿರುವ ವಿಷಯಕ್ಕೂ ಬಹಳಷ್ಟು ವ್ಯತ್ಯಾಸವಿದೆ’ ಎಂದು ವಾದಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next