Advertisement

“ಸಾಮಾಜಿಕ ಜಾಲತಾಣಗಳ ಮೂಲಕ ಹಿಂಸೆಗೆ ಪ್ರೇರಣೆ’

10:35 AM Jun 11, 2017 | Team Udayavani |

ಹೊಸದಿಲ್ಲಿ: ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಗಳನ್ನು ಹರಿಬಿಡುತ್ತಿರುವುದರ ಪರಿಣಾಮ ಜಮ್ಮು-ಕಾಶ್ಮೀರದ ಯುವಕರು ಹಿಂಸಾಚಾರದಂತಹ ಕೃತ್ಯಗಳತ್ತ ಒಲವು ತೋರುತ್ತಿದ್ದಾರೆ. ಪ್ರಚೋದನೆಗೆ ಒಳಗಾಗುತ್ತಿದ್ದಾರೆ ಎಂದು ಸೇನಾ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌ ಹೇಳಿದ್ದಾರೆ.

Advertisement

ಡೆಹ್ರಾಡೂನ್‌ನ ಸೇನಾ ಅಕಾಡೆಮಿ ಆಯೋಜಿಸಿದ ಪರೇಡ್‌ನ‌ಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಇಂಥ ಕೃತ್ಯಗಳ ವಿರುದ್ಧ ಸೇನಾ ಪಡೆಗಳು ಸೂಕ್ತ ಯೋಜನೆ ರೂಪಿಸಿ ಕಾರ್ಯಾಚರಣೆಗೆ ಇಳಿಯಬೇಕಾಗಿ ಬಂದಿದೆ. ಭಯೋತ್ಪಾ ದಕರ ವಿರುದ್ಧದ ಹೋರಾಟವೇ ದೇಶಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಉಗ್ರರ ಉಪಟಳವನ್ನು ಎದುರಿಸಲು ಸಿದ್ಧತೆ ಮಾಡಿಕೊಳ್ಳಬೇಕಾಗಿದೆ ಎಂದು ಹೇಳಿದರು.

ಇದೇ ವೇಳೆ, ಕಾರ್ಯಾಚರಣೆ ವೇಳೆ ಸಾರ್ವಜನಿಕರನ್ನು ನೇರವಾಗಿ ಎದುರಿಸಬೇಕಾಗಿ ಬರುತ್ತದೆ. ಮಹಿಳಾ ಪ್ರತಿಭಟ ನಕಾರರನ್ನೂ ಎದುರಿಸಬೇಕಾಗುತ್ತದೆ. ಅಂಥ ಸಂದರ್ಭಗಳಲ್ಲಿ ಅವರನ್ನು ಎದುರಿಸಲು ಸೇನೆಯಲ್ಲಿ ಮಹಿಳೆಯರು ಮಹತ್ವದ ಪಾತ್ರ ವಹಿಸಬೇಕಾಗುತ್ತದೆ ಎಂದೂ ರಾವತ್‌ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next