Advertisement

ಉಗ್ರರ ಗುಂಡೇಟಿಗೆ ಮತ್ತೊಬ್ಬ ಕಾಶ್ಮೀರಿ ಪಂಡಿತ ಬಲಿ

12:18 PM Feb 26, 2023 | Team Udayavani |

ಶ್ರೀನಗರ: ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಮತ್ತೊಬ್ಬ ಕಾಶ್ಮೀರಿ ಪಂಡಿತನ ಹತ್ಯೆಯಾಗಿದೆ. ಭಾನುವಾರ ( ಫೆ.26 ರಂದು) ಉಗ್ರರ ದಾಳಿಗೆ ಸಂಜಯ್‌ ಶರ್ಮಾ (40) ಎಂಬಾತ ಬಲಿಯಾಗಿದ್ದಾರೆ.

Advertisement

ಪುಲ್ವಾಮಾದ ಸ್ಥಳೀಯ ಮಾರುಕಟ್ಟೆಗೆ ತೆರಳುತ್ತಿದ್ದ ವೇಳೆ ಸಂಜಯ್‌ ಅವರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮ ತೀವ್ರ ಗಾಯಗೊಂಡ ಸಂಜಯ್‌ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದರೂ, ಗಂಭೀರ ಗಾಯಗೊಂಡ ಕಾರಣ ಅವರು ಮೃತಪಟ್ಟಿದ್ದಾರೆ. ಜಮ್ಮು ‍‍& ಕಾಶ್ಮೀರದ ಬ್ಯಾಂಕ್‌ ವೊಂದರಲ್ಲಿ ಸೆಕ್ಯೂರಿಟ್‌ ಗಾರ್ಡ್‌ ಆಗಿ ಸಂಜಯ್‌ ಶರ್ಮಾ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಉಗ್ರರು ಸಂಜಯ್‌ ಸರ್ಮಾ ಎಂಬಾತನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಪುಲ್ವಾಮದ ಮಾರುಕಟ್ಟೆಯಲ್ಲಿ ತೆರಳುತ್ತಿದ್ದ ವೇಳೆ ನಡೆಸಿದ ದಾಳಿಯ ಪರಿಣಾಮ ಅವರು ಮೃತಪಟ್ಟಿದ್ದಾರೆ. ಪೊಲೀಸರು ದಾಳಿಯಾದ ಪ್ರದೇಶದಲ್ಲಿ ಸುತ್ತುವರೆದು ಉಗ್ರರ ಸೆರೆಗೆ ಕಾರ್ಯಚರಣೆ ನಡೆಸುತ್ತಿದ್ದಾರೆ ಎಂದು ಕಾಶ್ಮೀರದ ಪೊಲೀಸರು ಹೇಳಿದ್ದಾರೆ.

ರಾಹುಲ್‌ ಭಟ್‌ ಹತ್ಯೆ ಖಂಡಿಸಿ ಕಳೆದ ಕೆಲ ಸಮಯದಿಂದ ಕಾಶ್ಮೀರಿ ಪಂಡಿತರು ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಈ ವೇಳೆಯಲ್ಲೇ ಮತ್ತೊಂದು ಕಾಶ್ಮೀರಿ ಪಂಡಿತನ ಹತ್ಯೆಯಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next