Advertisement

ಕಸ್ತೂರಿ ರಂಗನ್‌ ವರದಿ ವಿನಾಯಿತಿ;ಕಾರ್ಕಳ ಯುವಕನ ಮನವಿ:ಪಿಎಂ ಸ್ಪಂದನೆ!

10:44 AM Aug 03, 2018 | |

ಕಾರ್ಕಳ : ಪಶ್ಚಿಮ ಘಟ್ಟದ ವ್ಯಾಪ್ತಿಯಲ್ಲಿರುವ ಕಾರ್ಕಳ ತಾಲೂಕಿನ 10 ಗ್ರಾಮಗಳನ್ನು ಕಸ್ತೂರಿ ರಂಗನ್‌ ವರದಿಯ ಸೂಕ್ಷ್ಮವಲಯ ಪಟ್ಟಿಯಿಂದ ಕೈ ಬಿಡುವಂತೆ ಕಾರ್ಕಳದ ಯುವಕ ಬರೆದ ಪತ್ರಕ್ಕೆ ಪ್ರಧಾನಿ ಕಚೇರಿಯಿಂದ ತುರ್ತು ಸ್ಪಂದನೆ ದೊರಕಿದೆ. 

Advertisement

ಮಾಳದ ಅಕ್ಷತ್‌ ಕುಮಾರ್‌ ಅವರು ಮಾಳ,ಹೆಬ್ರಿ,ನಾಡ್ಪಾಲು,ಶಿರ್ಲಾಲು, ಕೆರ್ವಾಶೆ ಸೇರಿದಂತೆ ಮತ್ತು ಸುತ್ತಮುತ್ತಲಿನ 10 ಗ್ರಾಮಗಳನ್ನು ವರದಿಯಿಂದ ಕೈ ಬಿಡುವಂತೆ ಒತ್ತಾಯಿಸಿ ಪ್ರಧಾನಿ ಕಚೇರಿಗೆ ಪತ್ರ ಬರೆದಿದ್ದರು. ಪತ್ರಕ್ಕೆ ಸ್ಪಂದಿಸಿರುವ ಪ್ರಧಾನಿ ಕಚೇರಿ ಜಿಲ್ಲಾಡಳಿತಕ್ಕೆ ಗ್ರಾಮಗಳ ಪರಿಶೀಲನೆ ನಡೆಸಿ ವರದಿ ನೀಡಲು ಸೂಚನೆ ನೀಡಿದೆ. 

ಜಿಲ್ಲಧಿಕಾರಿಗಳು ಉಪವಿಭಾಗಾಧಿಕಾರಿಗಳಿಗೆ ಸೂಚನೆ ನೀಡಿದ ಹಿನ್ನಲೆಯಲ್ಲಿ ತಹಶೀಲ್ದಾರ್‌ ಅವರ ಸೂಚನೆ ಮೇರೆಗೆ ಗ್ರಾಮ ಲೆಕ್ಕಾಧಿಕಾರಿ ಪರಿಶೀಲನೆ ನಡೆಸಿ ವರದಿ ಸಿದ್ದಪಡಿಸುತ್ತಿದ್ದಾರೆ. 10 ಗ್ರಾಮಗಳನ್ನು ಕಸ್ತೂರಿ ರಂಗನ್‌ ವರದಿಯಿಂದ ಕೈಬಿಡುವ ವಿಶ್ವಾಸವಿದೆ ಎಂದು ಅಕ್ಷತ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Advertisement

ಕಸ್ತೂರಿ ರಂಗನ್‌ ವರದಿಯಲ್ಲಿ ಉಡುಪಿ ಜಿಲ್ಲೆಯ ಪಶ್ಚಿಮ ಘಟ್ಟಗಳ ತಪ್ಪಲಿನ 40 ಗ್ರಾಮಗಳು, ದಕ್ಷಿಣ ಕನ್ನಡ ಜಿಲ್ಲೆಯ 48 ಗ್ರಾಮಗಳನ್ನು ಸೇರ್ಪಡೆ ಮಾಡಲಾಗಿದ್ದು, ವರದಿ ಅನ್ವಯವಾದರೆ ಈ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿ , ಮೂಲಭೂತ ಸೌಕರ್ಯ ಮತ್ತು ಸಣ್ಣ ಕೈಗಾರಿಕೆಗಳು ಮುಂದುವರಿಯಲು ಅಡ್ಡಿಯಾಗುತ್ತದೆ. 

Advertisement

Udayavani is now on Telegram. Click here to join our channel and stay updated with the latest news.

Next