Advertisement

ಕಸ್ತೂರಿ ರಂಗನ್‌ ವರದಿ: ಜು. 25ಕ್ಕೆ ಕೇಂದ್ರಕ್ಕೆ ಸರ್ವ ಪಕ್ಷ ನಿಯೋಗ: ಸಿಎಂ

12:46 AM Jul 21, 2022 | Team Udayavani |

ಬೆಂಗಳೂರು: ಪಶ್ಚಿಮ ಘಟ್ಟಗಳ ಕುರಿತು ಕಸ್ತೂರಿ ರಂಗನ್‌ ವರದಿ ವಿರೋಧಿಸಿ ಜುಲೈ 25ರಂದು ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವರಿಕೆ ಮಾಡಲು ಸರ್ವ ಪಕ್ಷಗಳ ನಿಯೋಗ ತೆಗೆದುಕೊಂಡು ಹೋಗಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Advertisement

ಬುಧವಾರ ವಿಧಾನಸೌಧದಲ್ಲಿ ಸರ್ಕಾರದ ಇಲಾಖೆಗಳ ಕಾರ್ಯದರ್ಶಿಗಳು ಮತ್ತು ಪ್ರಧಾನ ಕಾರ್ಯದರ್ಶಿಗಳ ಸಭೆ ನಡೆಸಿ ನಂತರ ಮಾತನಾಡಿದ ಅವರು, ಜುಲೈ 24ರಂದು ದಿಲ್ಲಿಗೆ ತೆರಳುತ್ತಿದ್ದೇನೆ.

ಸಚಿವ ಸಂಪುಟ ವಿಸ್ತರಣೆ ನಿರ್ಧಾರ ವರಿಷ್ಠರಿಗೆ ಬಿಟ್ಟಿದ್ದು. ಸಂಪುಟ ವಿಸ್ತರಣೆ ಬಗ್ಗೆ ಹೇಳುವುದಾಗಿ ವರಿಷ್ಠರು ತಿಳಿಸಿದ್ದರು.

24ರಂದು ದಿಲ್ಲಿಗೆ ಹೋದಾಗ ವರಿಷ್ಠರು ಏನಾದರೂ ಹೇಳಬಹುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಹೊಸದಿಲ್ಲಿ ಪ್ರವಾಸದಲ್ಲಿರುವ ಸಿಎಂ ನೂತನ ರಾಷ್ಟ್ರಪತಿ ಪ್ರಮಾಣ ವಚನ ಕಾರ್ಯಕ್ರಮದಲ್ಲಿಯೂ ಪಾಲ್ಗೊಳ್ಳುವ ಸಾಧ್ಯತೆ ಇದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next