Advertisement

Kasturirangan ವರದಿ ವಿರೋಧ ಜಾಥಾ; ಲಕ್ಷ ಕುಟುಂಬದಿಂದ ಆಕ್ಷೇಪಣೆಗೆ ಪೂರ್ಣ ಸಿದ್ಧತೆ

02:51 PM Oct 28, 2023 | Team Udayavani |

ಶಿರಸಿ: ಕಸ್ತೂರಿ ರಂಗನ್ ವರದಿಯಲ್ಲಿ ಉ.ಕ. ಜಿಲ್ಲೆಯಲ್ಲಿ ಅತೀ ಸೂಕ್ಷ್ಮ ಪರಿಸರ ಪ್ರದೇಶ ವ್ಯಾಪ್ತಿಯ ಲಕ್ಷ ಕುಟುಂಬಗಳಿಂದ ವರದಿಗೆ ಆಕ್ಷೇಪಿಸಿ ಕೇಂದ್ರ ಸರಕಾರದ ಅರಣ್ಯ ಮತ್ತು ಪರಿಸರ ಇಲಾಖೆಗೆ ಸಲ್ಲಿಸಲು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯು ಪೂರ್ಣ ಪ್ರಮಾಣದ ಸಿದ್ಧತೆಗೊಂಡಿದೆ ಎಂದು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.

Advertisement

ಕಸ್ತೂರಿ ರಂಗನ್ ವರದಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ 9 ತಾಲೂಕಿನ, 704 ಹಳ್ಳಿಗಳಲ್ಲಿ, 147 ಗ್ರಾ.ಪಂ. ವ್ಯಾಪ್ತಿಯಲ್ಲಿನ ವರದಿಗೆ ಆಕ್ಷೇಪಿಸಿ ಹೋರಾಟಗಾರರ ವೇದಿಕೆ ಧುರೀಣರು ಮನೆ- ಮನೆಗೆ ತೆರಳಿ ಪ್ರತಿ ಕುಟುಂಬದಿಂದಲೂ ಉಚಿತವಾಗಿ ಆಕ್ಷೇಪಣೆ ಸಲ್ಲಿಸುವ ಪ್ರಕ್ರಿಯೆ ಜರುಗಿಸುತ್ತೇವೆ ಎಂದು ತಿಳಿಸಿದರು.

ಜಿಲ್ಲಾದ್ಯಂತ ನಡೆಯುವ ಮನೆ-ಮನೆಯಿಂದ ವರದಿಗೆ ಆಕ್ಷೇಪ ಸಲ್ಲಿಸುವ ಪ್ರಕ್ರಿಯೆಯಲ್ಲಿ ಐದು ಸಾವಿರಕ್ಕೂ ಮಿಕ್ಕಿ ಹೋರಾಟಗಾರರ ವೇದಿಕೆ ಸದಸ್ಯರು ಸಕ್ರೀಯವಾಗಿ ಪಾಲ್ಗೊಳ್ಳುವರು ಎಂದು ಹೇಳಿದರು.

ಹೋರಾಟಗಾರರ ವೇದಿಕೆಯ ತಂಡವು ಸಂಚರಿಸಿ, ವಿವಿಧ ತಾಲೂಕಿನ, ವಿವಿಧ ಹಳ್ಳಿಗಳಲ್ಲಿ ವರದಿ ಜಾರಿಯಿಂದ ಅರಣ್ಯವಾಸಿಗಳಿಂದ ಉಂಟಾಗುವ ದುಷ್ಪರಿಣಾಮದ ಕುರಿತು ಸುಮಾರು ಐದ ನೂರಕ್ಕೂ ಮಿಕ್ಕಿ ಜನ ಜಾಗೃತೆ ಕಾರ್ಯಕ್ರಮ ಮತ್ತು ಶಿಬಿರಗಳನ್ನ ಸಂಘಟಿಸುವುದೊಂದಿಗೆ, ಕಸ್ತೂರಿ ರಂಗನ್ ವರದಿಯ ಅವೈಜ್ಞಾನಿಕತೆ ಹಾಗೂ ವರದಿ ಜಾರಿಗೆ ಬಂದಲ್ಲಿ ಉಂಟಾಗುವ ದುಷ್ಪರಿಣಾಮದ ಕುರಿತು ಎರಡು ಲಕ್ಷ ಕರಪತ್ರ ವಿತರಿಸಲು ವೇದಿಕೆಯು ಸನ್ನದ್ಧವಾಗಿದೆ ಎಂದು ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next