Advertisement

ಕಾಟಕೇರಿ: ಹೆದ್ದಾರಿ ಬಿರುಕಿಗೆ ತಾತ್ಕಾಲಿಕ ತೇಪೆ

09:33 AM Jul 06, 2019 | keerthan |

ಮಡಿಕೇರಿ: ಮಡಿಕೇರಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ರ ಕಾಟಕೇರಿ ಬಳಿ ಕಾಣಿಸಿಕೊಂಡಿರುವ ರಸ್ತೆ ಬಿರುಕನ್ನು ಕಾಂಕ್ರೀಟ್‌ನಿಂದ ಮುಚ್ಚಿ ಮಳೆನೀರು ಒಳಹರಿದು ಸಂಭವಿಸಬಹುದಾದ ಹೆಚ್ಚಿನ ಅನಾಹುತವನ್ನು ತಪ್ಪಿಸುವ ಪ್ರಯತ್ನ ಮಾಡಲಾಗಿದೆ.

Advertisement

ರಸ್ತೆ ಮೇಲೆ ನೀರು ಹರಿಯದಂತೆ ಸ್ಯಾಂಡ್‌ ಬಂಡ್‌ಗಳನ್ನು ಅಳವಡಿಸಿ ಕುಸಿತ ಸಂಭವಿಸದಂತೆ ಕ್ರಮ ಕೈಗೊಳ್ಳ ಲಾಗಿದೆ. ಮುಂಜಾಗ್ರತೆಯಾಗಿ ಬ್ಯಾರಿಕೇಡ್‌ ಗಳನ್ನು ಅಳವಡಿಸಿ ಪೊಲೀಸರು ನಿಗಾ ವಹಿಸಿದ್ದಾರೆ.

ಸ್ಥಳಕ್ಕೆ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಭೇಟಿ ನೀಡಿ ರಾ.ಹೆ. ನಿರ್ವಹಣ ಘಟಕದ ಅಭಿಯಂತ ರೊಂದಿಗೆ ಸಮಾಲೋಚಿಸಿದರು. ಶಾಸಕರಾದ ಕೆ.ಜಿ. ಬೋಪಯ್ಯ ಮತ್ತು ಎಂ.ಪಿ. ಅಪ್ಪಚ್ಚು ರಂಜನ್‌ ಸ್ಥಳ ಪರಿಶೀಲನೆ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next