Advertisement

Katapadi: ಕಾರು ಢಿಕ್ಕಿ; ಕಾರ್ಮಿಕ ಸಾವು

11:16 PM Nov 15, 2023 | Team Udayavani |

ಕಾಪು: ಪೈಂಟಿಂಗ್‌ ಕೆಲಸಕ್ಕೆ ಹೋಗಿ ಮನೆಗೆ ವಾಪಸ್ಸಾಗುತ್ತಿದ್ದ ಕಾರ್ಮಿಕನೋರ್ವ ಕಾರು ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ರಾ.ಹೆ. 66ರ ಕಟಪಾಡಿಯಲ್ಲಿ ನ. 14ರಂದು ನಡೆದಿದೆ. ಚಾಲಕ ಕಾರನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ.

Advertisement

ಇನ್ನಂಜೆ ನಿವಾಸಿ ಉತ್ತಮ್‌ (33) ಮೃತ ಕಾರ್ಮಿಕ.

ಕಾರು ಢಿಕ್ಕಿ ಹೊಡೆದ ರಭಸಕ್ಕೆ ಗಂಭೀರ ಗಾಯಗೊಂಡಿದ್ದ ಉತ್ತಮ್‌ ಅವರನ್ನು ಸ್ಥಳೀಯರು ಚಿಕಿತ್ಸೆಗಾಗಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಪರೀಕ್ಷಿಸಿದ ವೈದ್ಯರು ಗಾಯಾಳು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಮೃತರ ಸಹೋದರಿ ಸುಜಲಾ ಅವರು ನೀಡಿರುವ ದೂರಿನಂತೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next