Advertisement

ಕಟಪಾಡಿ : ಅನಾರೋಗ್ಯದಿಂದ ಕುಸಿದು ಬಿದ್ದು ಸಾವು

07:58 PM Apr 16, 2023 | Team Udayavani |

ಕಾಪು : ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಕಟಪಾಡಿ ಮಟ್ಟು ತೆಂಕು ಕೊಪ್ಲ ನಿವಾಸಿ ಪೂರ್ಣಿಮಾ ಶಂಕರ್‌ (58) ಅವರು ಅನಾರೋಗ್ಯ ಉಲ್ಬಣಗೊಂಡು ಮನೆಯಂಗಳದಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ಎ. 15ರಂದು ನಡೆದಿದೆ.

Advertisement

ಮಾನಸಿಕ ಖನ್ನತೆ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬಾಳಿಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ‌ು ಬಳಿಕ ಶ್ವಾಸಕೋಶದ ಸಮಸ್ಯೆ ಬಗ್ಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ವಾಪಸ್ಸಾಗಿದ್ದರು. ಶನಿವಾರ ಮನೆಯಲ್ಲಿ ಯಾರೂ ಇಲ್ಲದಿದ್ದ ವೇಳೆ ಮನೆಯಂಗಳದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಅವರನ್ನು ಉಡುಪಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ, ಅಲ್ಲಿಂದ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದು ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next