Advertisement

Katapadi : ಹೃದಯಾಘಾತದಿಂದ ವ್ಯಕ್ತಿ ಮೃತ್ಯು.

12:01 AM Oct 07, 2023 | Team Udayavani |

ಕಾಪು: ಕಟಪಾಡಿ ಅಂಚೆ ಕಚೇರಿಯ ಬಳಿಯ ಬಾಡಿಗೆ ರೂಮಿನಲ್ಲಿ ವಾಸವಾಗಿದ್ದ ರಾಮ್‌ದೇವ್‌ ರಿಶಿದೇವ್‌ (47) ಅವರು ಹೃದಯಾಘಾತದಿಂದಾಗಿ ಮೃತಪಟ್ಟ ಘಟನೆ ಅ. 5ರಂದು ನಡೆದಿದೆ.

Advertisement

ರಾಮ್‌ದೇವ್‌ ರಿಶಿದೇವ್‌ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಈ ಬಗ್ಗೆ ಅವರ ಜತೆ ಕೆಲಸ ಮಾಡುತ್ತಿದ್ದ ಸಂಜಯ್‌ ಕುಮಾರ್‌ ಅವರು ಮಗನಿಗೆ ಫೋನ್‌ ಮಾಡಿ ತಿಳಿಸಿದ್ದರು. ಮಗ ಬಂದು ವಿಚಾರಿಸಿ ಎದೆನೋವು ಎಂದು ಅಸ್ವಸ್ಥರಾಗಿದ್ದವರನ್ನು 108 ಆ್ಯಂಬ್ಯುಲೆನ್ಸ್‌ನಲ್ಲಿ ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಮೃತರ ಮಗ ಶ್ಯಾಮ ಕುಮಾರ್‌ ನೀಡಿದ ದೂರಿನಂತೆ ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next