Advertisement

Katapady: ಉದ್ಯಾವರ ಗ್ರಾ.ಪಂ. ಮಾಜಿ ಅಧ್ಯಕ್ಷೆ ಸರಳಾ ಎಸ್‌. ನಿಧನ

01:59 PM Oct 26, 2024 | Team Udayavani |

ಕಟಪಾಡಿ: ಉದ್ಯಾವರ ಗ್ರಾ.ಪಂ.ನ ಮಾಜಿ ಅಧ್ಯಕ್ಷೆ ಸರಳಾ ಎಸ್‌. (75) ಅವರು ಅನಾರೋಗ್ಯದಿಂದ ಬೋಳಾರಗುಡ್ಡೆಯ ಸ್ವಗೃಹದಲ್ಲಿ ಅ.26ರ ಶನಿವಾರ ನಿಧನ ಹೊಂದಿದರು.

Advertisement

ಮೃತರು ಇಬ್ಬರು ಪುತ್ರರನ್ನು ಅಗಲಿದ್ದಾರೆ.

ತನ್ನ 75ನೇ ಹುಟ್ಟುಹಬ್ಬದ ದಿನದಂದೇ ಅಸುನೀಗಿದ್ದು, ಮನೆಯಲ್ಲಿ ದುಃಖದ ಛಾಯೆ ಮಡುಗಟ್ಟಿದೆ.

1995-98ರ ಅವಧಿಯಲ್ಲಿ ಉದ್ಯಾವರ ಗ್ರಾ.ಪಂ. ಅಧ್ಯಕ್ಷೆಯಾಗಿ, ಕಾಂಗ್ರೆಸ್‌ ಪಕ್ಷದ ನಿಷ್ಠಾವಂತ ಕಾರ್ಯಕರ್ತೆಯಾಗಿದ್ದು, ಸುಮಾರು 40 ವರ್ಷಗಳ ಕಾಲ ಉದ್ಯಾವರ ಗ್ರಾಮೀಣ ಕಾಂಗ್ರೆಸ್‌ನಲ್ಲಿದ್ದು, ಪಕ್ಷದ ಅನೇಕ ಹುದ್ದೆಗಳಲ್ಲಿ ಕಾರ್ಯನಿರ್ವಹಣೆ ಮಾಡಿದ್ದರು. ಮಾಜಿ ಕರ್ನಾಟಕ ಮೀನುಗಾರಿಕಾ ನಿಗಮದ ಸದಸ್ಯೆಯಾಗಿದ್ದರು. ಸಾಮಾಜಿಕ ಕಾರ್ಯಕರ್ತೆಯಾಗಿದ್ದು, ಸಾಮಾಜಿಕ ಏಕತೆಯಲ್ಲಿ ನಂಬಿಕೆ ಇರಿಸಿ ತೊಡಗಿಸಿಕೊಂಡಿದ್ದರು.

ಮೃತರ ಅಂತಿಮ ದರ್ಶನ ಪಡೆದ ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ, ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು, ಯುಎಫ್‌ಸಿ ಗೌರವಾಧ್ಯಕ್ಷ ಉದ್ಯಾವರ ನಾಗೇಶ್‌ ಕುಮಾರ್‌, ಉದ್ಯಾವರ ಗ್ರಾಮೀಣ ಕಾಂಗ್ರೆಸ್‌ ಅಧ್ಯಕ್ಷ ನಿತಿನ್‌ ಜೆ. ಸಾಲಿಯಾನ್‌, ಉತ್ತರ ವಲಯ ಕಾಪು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸಂತೋಷ್‌ ಕುಲಾಲ್‌ ಪಕ್ಕಾಲು, ಉದ್ಯಾವರ ಗ್ರಾ.ಪಂ. ಸದಸ್ಯರು, ಮಾಜಿ ಅಧ್ಯಕ್ಷರಾದ ರಾಧಾಕೃಷ್ಣ ಶ್ರೀಯಾನ್‌, ಸುಗಂಧಿಶೇಖರ್‌ ಸಹಿತ ಇತರ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next