Advertisement

Kateel: ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

01:40 AM Oct 28, 2024 | Team Udayavani |

ಕಟೀಲು: ಕಿನ್ನಿಗೋಳಿ ಪಟ್ಟಣ ಪಂಚಾಯತ್‌ ವ್ಯಾಪ್ತಿಯ ಕಟೀಲು ಕೊಂಡೆಮೂಲದ ಸರಕಾರಿ ಆಸ್ಪತ್ರೆಯ ಹಿಂಭಾಗದ ನೀರಿನ ಟ್ಯಾಂಕ್‌ ಬಳಿ ವ್ಯಕ್ತಿಯೊಬ್ಬರ ಶವ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ತಾರಾನಾಥ (40) ಎಂದು ಗುರುತಿಸಲಾಗಿದೆ.

Advertisement

ಸ್ಥಳೀಯರು ಬಜಪೆ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌, ಡಿಸಿಪಿ ಸಿದ್ಧಾರ್ಥ್ ಗೋಯಲ್‌, ಎಸಿಪಿ ಶ್ರೀಕಾಂತ್‌, ಬಜಪೆ ಇನ್‌ಸ್ಪೆಕ್ಟರ್‌ ಸಂದೀಪ್‌ ಅವರನ್ನೊಳಗೊಂಡ ಪೊಲೀಸರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

Advertisement

Udayavani is now on Telegram. Click here to join our channel and stay updated with the latest news.

Next