Advertisement

Kateel: ಸಂಭ್ರಮದ ಲಲಿತಾ ಪಂಚಮಿ: 15 ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಶೇಷ ವಸ್ತ್ರ ವಿತರಣೆ

01:48 AM Oct 09, 2024 | Team Udayavani |

ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಅಂಗವಾಗಿ ಮಂಗಳವಾರ ಲಲಿತಾ ಪಂಚಮಿಯ ಆರಾಧನೆ ನಡೆಯಿತು.

Advertisement

ಸುಮಾರು 15 ಸಾವಿರಕ್ಕೆ ಅಧಿಕ ಮಹಿಳಾ ಭಕ್ತರಿಗೆ ಶ್ರೀ ದೇವರ ಶೇಷ ವಸ್ತ್ರದ ವಿತರಣೆಯು ಅನ್ನ ಪ್ರಸಾದದ ಸಂದರ್ಭದಲ್ಲಿ ನಡೆಯಿತು.

ಮಧ್ಯಾಹ್ನ 10 ಸಾವಿರ ಹಾಗೂ ರಾತ್ರಿ ಸುಮಾರು 20 ಸಾವಿರ ಭಕ್ತರು ಅನ್ನ ಪ್ರಸಾದ ಸ್ವೀಕರಿಸಿದರು. ಕಟೀಲು ದೇವಸ್ಥಾನದಲ್ಲಿ ಅನ್ನ ಪ್ರಸಾದ ಹಾಗೂ ಶ್ರೀ ದೇವರ ಶೇಷ ವಸ್ತ್ರದ ಪಡೆಯಲು ಮಹಿಳಾ ಭಕ್ತರು ಮಧ್ಯಾಹ್ನದಿಂದಲೇ ಕಾಯುತ್ತಿದ್ದುದರಿಂದ ಅವರಿಗೆ ನಿಲ್ಲಲು ಸೂಕ್ತ ವ್ಯವಸ್ಥೆ ಮಾಡಲಾಗಿತ್ತು.

ದೇವರ ದರ್ಶನ ಹಾಗೂ ಅನ್ನ ಪ್ರಸಾದ ವಿತರಣೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ ಎಂದು ದೇವಸ್ಥಾನದ ಮೂಲ ತಿಳಿಸಿದೆ. ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರಿಂದ ಅಲ್ಲಲ್ಲಿ ಟ್ರಾಫಿಕ್‌ ಜಾಮ್‌ ಕಾಣಿಸಿಕೊಂಡಿತು.

Advertisement

Udayavani is now on Telegram. Click here to join our channel and stay updated with the latest news.

Next