Advertisement

BJP ಸೋಲಿಗೆ ಕಟೀಲ್‌ ಕಾರಣ: ರೇಣುಕಾಚಾರ್ಯ

09:02 PM Jun 28, 2023 | Team Udayavani |

ಹೊನ್ನಾಳಿ: ರಾಜ್ಯದಲ್ಲಿ ಬಿಜೆಪಿ ಹೀನಾಯ ಸೋಲಿಗೆ ರಾಜ್ಯಾಧ್ಯಕ್ಷ ನಳಿನಕುಮಾರ್‌ ಕಟೀಲ್‌ ಕಾರಣ. ಸೋಲಿನ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಮುಗಿಬಿದ್ದಿದ್ದಾರೆ. ಹೊನ್ನಾಳಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರ ಬಗ್ಗೆ ಅನೇಕರು ಆರೋಪಗಳನ್ನು ಮಾಡಿದಾಗ ಅವರ ವಿರುದ್ಧ ರಾಜ್ಯಾಧ್ಯಕ್ಷರು ಏಕೆ ಶಿಸ್ತು ಕ್ರಮ ತೆಗೆದುಕೊಳ್ಳಲಿಲ್ಲ ಎಂದು ಪ್ರಶ್ನಿಸಿದ್ದಾರೆ.

Advertisement

ಪಕ್ಷದ ಮುಖಂಡರು, ಕಾರ್ಯಕರ್ತರು, ಜನರು ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಿದ್ದು ದೊಡ್ಡ ಅಪರಾಧ ಎಂದು ಮನನೊಂದು ಮಾತನಾಡುತ್ತಿದ್ದಾರೆ. ಪಕ್ಷಕ್ಕಾಗಿ ದುಡಿದವರನ್ನು ಬಿಟ್ಟು ಪಕ್ಷಕ್ಕೆ ಯಾವುದೇ ಕೊಡುಗೆ ನೀಡದ ಡಾ| ಕೆ. ಸುಧಾಕರ್‌ ಅವರನ್ನು ಪ್ರಣಾಳಿಕೆ ಸಮಿತಿ ಅಧ್ಯಕ್ಷರನ್ನಾಗಿ ಮಾಡಿದ್ದರಿಂದ ಪಕ್ಷಕ್ಕೆ ತೀವ್ರ ಹಿನ್ನಡೆ ಉಂಟಾಯಿತು. ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ ಅವರ ಕೈ ಕಟ್ಟಿ ಹಾಕಿದ್ದು ಕೂಡ ಸೋಲಿಗೆ ಕಾರಣವಾಯಿತು ಎಂದು ರೇಣುಕಾಚಾರ್ಯ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next